• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಚಾಮರಾಜನಗರದಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಚಾಮರಾಜನಗರದಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ
ಚಾಮರಾಜನಗರಜಿಲ್ಲೆ

ಚಾಮರಾಜನಗರದಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ

admin
Last updated: 2023/09/29 at 9:16 AM
admin
Share
2 Min Read
SHARE

ಚಾಮರಾಜನಗರ: ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವ ಹಿನ್ನಲೆಯಲ್ಲಿ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಗೆ ಕರ್ನಾಟಕ ತಮಿಳು ನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಯಶಸ್ವಿಯತ್ತ ಸಾಗಿದೆ.

ಚಾಮರಾಜನಗರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಬೆಳಗ್ಗೆಯಿಂದಲೇ ಕನ್ನಡ ಪರ ಹೋರಾಟಗಾರರು, ರೈತರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ರಸ್ತೆಗಿಳಿದು, ಹೆದ್ದಾರಿ ತಡೆಯೊಡ್ಡಿ ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ ,ತಮಿಳುನಾಡು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗ ಜಮಾಯಿಸಿದ ಹೋರಾಟಗಾರರು ಧರಣಿ ನಡೆಸಿದರೆ, ಕಾವೇರಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪಾದಯಾತ್ರೆ ಮೂಲಕ ಕಿವಿಯಲ್ಲಿ ಗುಲಾಬಿ ಹೂವಿಟ್ಟುಕೊಂಡು ಬಂದ್ ಸಹಕರಿಸುವಂತೆ ಸಾರ್ವಜನಿಕರಲ್ಲಿ ಹಾಗೂ ವರ್ತಕರಲ್ಲಿ ಮನವಿ ಮಾಡಿದರು.

ಶ್ರೀ ಭುವನೇಶ್ವರಿ ವೃತ್ತದ ಮೂಲಕ ತಮಿಳುನಾಡಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋರಾಟಗಾರರು ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದರು.

ಈ ನಡುವೆ ಕೆ.ಎಸ್.ಆರ್. ಟಿ.ಸಿ ಬಸ್ ಗಳು ರಸ್ತೆಗಿಳಿಯದೆ ಬಸ್ ನಿಲ್ದಾಣದಲ್ಲೇ ಇದ್ದವು. ಪೊಲೀಸ್ ಪಹರೆ ಹೆಚ್ಚಾಗಿತ್ತು. ಅಖಂಡ ಕರ್ನಾಟಕ ಬಂದ್ ವಿಷಯ ಮೊದಲೇ ತಿಳಿದಿದ್ದರಿಂದ ದೂರದೂರಿಗೆ ಹೋಗುವ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬಂದಿರಲಿಲ್ಲ. ತುರ್ತು ಕೆಲಸ ನಿಮಿತ್ತ ತೆರಳುವವರು ಮಾತ್ರ ಬಂದದ್ದು ಕಂಡು ಬಂತು.

ಅಂತರಾಜ್ಯ ಗಡಿಯಲ್ಲಿ ಭದ್ರತೆ: ಕರ್ನಾಟಕ ತಮಿಳುನಾಡು ಗಡಿ ಭಾಗವಾಗಿರುವ ಕಾರ್ಯಪಾಳ್ಯಂ ಬಳಿ ತಮಿಳುನಾಡು ಪೊಲೀಸರನ್ನು ನಿಯೋಜಿಸಲಾಗಿದ್ದು, ಗಡಿಯಿಂದ ಕರ್ನಾಟಕದೊಳಗೆ ಯಾವುದೇ ವಾಹನವನ್ನು ಬಿಡದೇ ತಮಿಳುನಾಡು ಪೊಲೀಸರು ಕಾವಲು ಕಾಯುತ್ತಿದ್ದರು.

ತಮಿಳುನಾಡಿನಿಂದ ತಾಳವಾಡಿಗೆ ಹೋಗುವ ವಾಹನಗಳನ್ನು ದಿಂಬಂ ತಲೈಮಲೆ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿತ್ತು. ಚಾಮರಾಜನಗರ ತಾಲ್ಲೂಕಿನ ಪುಣಜನೂರು ಚಕ್ ಪೋಸ್ಟ್ ಬಳಿ ಕರ್ನಾಟಕ ಪೊಲೀಸರನ್ನು ನಿಯೋಜನೆ ಮಾಡಿದ್ದರಿಂದ ಎರಡೂ ರಾಜ್ಯಗಳ ನಡುವೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಅಂಗಡಿಗಳು ಬಂದ್: ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳನ್ನು ವರ್ತಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರಿಂದ ವ್ಯಾಪಾರ ವಹಿವಾಟು ಇಲ್ಲದೆ ಬಿಕೋ ಎನ್ನುತ್ತಿದ್ದವು ಸಾರ್ವಜನಿಕರ ಸಂಚಾರ ವಿರಳವಾಗಿದ್ದರಿಂದ ರಸ್ತೆಯಲ್ಲಿ ಬಿಕೋ ಎನ್ನುವ ಸ್ಥಿತಿ ಇತ್ತು.

ಬಣ್ಣಾರಿ ಚಕ್ ಪೋಸ್ಟ್ ನಲ್ಲೇ ವಾಹನಗಳಿಗೆ ತಡೆ: ತಮಿಳುನಾಡಿನ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಕರ್ನಾಟಕಕ್ಕೆ ತೆರಳುವ ವಾಹನಗಳಿಗೆ ತಡೆ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವನ್ನು ತಮಿಳುನಾಡು ಪೊಲೀಸರು ವಹಿಸಿದ್ದರು. ದಿಂಬಂ ತಲೈಮಲೆ ಮೂಲಕ ತಾಳವಾಡಿಯತ್ತ ಸಾಗುವ ವಾಹನಗಳಿಗೆ ಮಾತ್ರ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಅವಕಾಶ ನೀಡಲಾಗಿತ್ತು. ಇದರಿಂದಾಗಿ ಬಣ್ಣಾರಿ ಚಕ್ ಪೋಸ್ಟ್ ನಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಕಾವೇರಿ ಕ್ರಿಯಾಸಮಿತಿಯ ಮುಖಂಡರುಗಳಾದ ಶಾ.ಮುರಳಿ, ಚಾ.ರಂ. ಶ್ರೀನಿವಾಸಗೌಡ, ಗು ಪುರುಷೋತ್ತಮ್, ಜಿ.ಬಂಗಾರು, ಎಸ್ ಡಿ ಪಿ ಐ ನ ಅಬ್ರಾರ್ ಅಮಹದ್, ಜೆಡಿಎಸ್ ನ ಆಲೂರು ಮಲ್ಲು, ರಾಜು, ಕನ್ನಡ ಹೋರಾಟಗಾರರಾದ ನಿಜಧ್ವನಿ ಗೋವಿಂದರಾಜು ಪ್ರಶಾಂತ್ ಕುಮಾರ್, ಬಿ.ಎಸ್.ಪಿಯ ನಾಗಯ್ಯ, ಪರ್ವತರಾಜು, ಬೇಡಮೂಡ್ಲು ಬಸವಣ್ಣ , ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜು, ಹೆಬ್ಬಸೂರು ಬಸವಣ್ಣ, ಹರ್ಷ ಹೀಗೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: chamarajanagara Mysuru Karnataka Band
admin September 29, 2023
Share this Article
Facebook Twitter Whatsapp Whatsapp LinkedIn Copy Link
Previous Article ರೈತ ಸಂಘಟನೆಗಳ ಪ್ರತಿಭಟನೆ ನಂಜನಗೂಡು ಬಂದ್ ಯಶಸ್ವಿ
Next Article ಇದುವರೆಗೂ ಪರಿಹಾರ ಸಿಗದ ಏಕೈಕ ಸಮಸ್ಯೆ ಕಾವೇರಿ – ಉಪೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?