ಮೈಸೂರು : ಮಹಿಷ ದಸರಾ ಆಚರಣೆ ವಿವಾದ ವಿಚಾರ.
ಶಾಸಕ ಟಿ.ಎಸ್ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲಾಡಳಿತ ಮಹಿಷ ದಸರಾ ಮತ್ತು ಚಾಮುಂಡಿ ಚಲೋ ಎರಡಕ್ಕೂ ಅನುಮತಿ ಕೊಟ್ಟಿಲ್ಲ.ಮೈಸೂರು ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಮೇಲೆ ನಂಬಿಕೆ ಇದೆ.
ಇದಕ್ಕೆಲ್ಲ ಅವಕಾಶ ಕೊಡುವುದಿಲ್ಲ ಎಂದು.
ನಾಳೆ ಒಂದು ವೇಳೆ ಕದ್ದುಮುಚ್ಚಿ ಹೋಗಿ ಪುಷ್ಪಾರ್ಚನೆ ಮಾಡಿ ಬಂದರೆ ಏನು ಮಾಡೋಕೆ ಆಗುತ್ತೆ? ಎಲ್ಲದಕ್ಕೂ ಮುಂದೆ ಉತ್ತರ ಕೊಡ್ತೀವಿ ಎಂದರು.
ನಮಗೆ ಮಹಿಷ ದಸರಾವನ್ನ ಚಾಮುಂಡಿ ಬೆಟ್ಟದ ಮಾಡುವುದಕ್ಕೆ ವಿರೋಧವಿದೆ ಅಷ್ಟೇ.
ಬೆಟ್ಟಕ್ಕೆ ತನ್ನದೇ ಆದ ಪಾವಿತ್ರೆತೆ ಇದೆ ಅದನ್ನು ಹಾಳು ಮಾಡಬಾರದು.ನಾನು ಯಾರ ಒತ್ತಡಕ್ಕೂ ಮಣಿದಿಲ್ಲ.
ಪಕ್ಷಕ್ಕಾಗಿ ಕಳೆದ 38 ವರ್ಷ ದುಡಿಯುತ್ತಿದ್ದೇನೆ.
ನಾವು ಒಂದು ಸಿದ್ದಾಂತಕ್ಕಾಗಿ ಕೆಲಸ ಮಾಡುತ್ತಿದ್ದೇವೆ.
ಸ್ವತಃ ಸಿಎಂ ಪತ್ನಿಯೇ ಜನ ಸಾಮಾನ್ಯರಂತೆ ಬಂದು ಚಾಮುಂಡಿ ತಾಯಿಯ ದರ್ಶನ ಪಡೆದು ಹೋಗುತ್ತಾರೆ.
ಪ್ರಧಾನಿ, ರಾಷ್ಟ್ರಪತಿಗಳು ಬಂದು ಹೋಗಿರುವ ಪವಿತ್ರ ಚಾಮುಂಡಿ ಬೆಟ್ಟ. ಹಾಗಾಗಿ ಅಲ್ಲಿನ ಪಾವಿತ್ರತೆ ಹಾಳು ಮಾಡುವ ಕೆಲಸ ಮಾಡಬಾರದು ಎಂದರು.
ಒಂದು ವೇಳೆ ಜಿಲ್ಲಾಡಳಿತದ ಆದೇಶವನ್ನು ಮೀರಿ ಮಹಿಷಾ ದಸರಾವನ್ನು ಆಚರಣೆ ಮಾಡಿದರೆ
ನಾವು ಮುಂದೆ ಏನು ಮಾಡಬೇಕೆಂದು ಪಕ್ಷದ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು
ಮೈಸೂರಿನಲ್ಲಿ ಶಾಸಕ ಶ್ರೀವತ್ಸ ಹೇಳಿದರು