• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕನ್ನಡ ಸಾಹಿತ್ಯದ ಕುರಿತು ಚಿಂತಿಸಬೇಕು – ಜಯಂತ್ ಕಾಯ್ಕಿಣಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > Uncategorized > ಕನ್ನಡ ಸಾಹಿತ್ಯದ ಕುರಿತು ಚಿಂತಿಸಬೇಕು – ಜಯಂತ್ ಕಾಯ್ಕಿಣಿ
Uncategorized

ಕನ್ನಡ ಸಾಹಿತ್ಯದ ಕುರಿತು ಚಿಂತಿಸಬೇಕು – ಜಯಂತ್ ಕಾಯ್ಕಿಣಿ

admin
Last updated: 2023/10/17 at 12:10 PM
admin
Share
2 Min Read
SHARE

ಕನ್ನಡ ಭಾಷೆ ಸಾಹಿತ್ಯದ ಕುರಿತು ಚಿಂತಿಸುವ ಅವಶ್ಯಕತೆ ನಿಜವಾಗಿಯೂ ನಮ್ಮ ಮುಂದಿದೆ : ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

ಮೈಸೂರು ದಸರಾ ಕವಿಗೋಷ್ಠಿ ಉದ್ಘಾಟಿಸಿದ ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

ಮೈಸೂರು : ಕನ್ನಡ ಭಾಷೆ ಸಾಹಿತ್ಯದ ಕುರಿತು ಚಿಂತಿಸುವ ಅವಶ್ಯಕತೆ ನಿಜವಾಗಿಯೂ ನಮ್ಮ ಮುಂದಿದೆ ಎಂದು ಎಂದು ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಅವರು ತಿಳಿಸಿದರು.

ದಸರಾ ಮಹೋತ್ಸವದ ಅಂಗವಾಗಿ ಮಂಗಳವಾರ ಕಲಾಮಂದಿರಲ್ಲಿ ನಡೆದ ಕವಿಗೋಷ್ಠಿ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಸಾಹಿತ್ಯ ಎಂಬುದು ವೈಚಾರಿಕತೆಯ ಹೊಸ ಬಾಗಿಲನ್ನು ತೆರೆಯುತ್ತದೆ. ಕನ್ನಡ ಪಾಠಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ತಮ್ಮ ಮಕ್ಕಳನ್ನು ಆಂಗ್ಲ ಪಾಠಶಾಲೆಗೆ ಸೇರಿಸುತ್ತಿರುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕನ್ನಡ ಭಾಷೆ ಸಾಹಿತ್ಯದ ಕುರಿತು ಚಿಂತಿಸುವ ಅವಶ್ಯಕತೆ ನಿಜವಾಗಿಯೂ ನಮ್ಮ ಮುಂದಿದೆ ಎಂದು ಹೇಳಿದರು.

ಸಾಹಿತ್ಯ ಮಾರ್ಗದಲ್ಲಿ ಬದುಕಿನ ಕುರಿತು ಹೊಸತನ್ನು ಹುಡುಕುವುದು ಹಾಗೂ ವಿಕಾಸದ ಅನ್ವೇಷಣೆ ಮುಖ್ಯ. ಇದಕ್ಕೆ ಸಾಹಿತ್ಯ ಮೂಲಾಧಾರ. ಪ್ರಶಸ್ತಿಗಳ ಆಸೆಗಾಗಿ ಕವಿತೆ, ಸಾಹಿತ್ಯ ಬರೆಯುವುದಲ್ಲ. ಹೊಸ ತಲೆಮಾರು ಮೊದಲು ಓದುವುದನ್ನು ಮುಂದುವರಿಸಬೇಕು. ಏನನ್ನು ಓದದೇ ಹೊಸದನ್ನು ಬರೆಯಲು ಸಾಧ್ಯವಿಲ್ಲ ಎಂದು ಯುವ ಕವಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹಾದೇವಪ್ಪ ನಾಲ್ವಡಿ ಕೃಷ್ಣರಾಜರವರ ಆಡಳಿತವು ಈಗಿನ ಸಾಹಿತ್ಯ ಚಳುವಳಿಗೆ ಪ್ರೇರಣೆಯಾಗಲಿ. ಈ ಕವಿಗೋಷ್ಠಿ ವೇದಿಕೆಯಲ್ಲಿ ಸಮಾಜದ ಎಲ್ಲಾ ಸಮಸ್ಯೆಗಳನ್ನು ಕುರಿತು ಸುದೀರ್ಘ ಚರ್ಚೆಯಾಗಲಿ ಎಂದು ಸಲಹೆ ನೀಡಿದರು.

ವಚನ ಸಾಹಿತ್ಯ ಚಳುವಳಿಯ ಮೂಲಕ ಸಮಾಜದಲ್ಲಿನ ಬದಲಾವಣೆಗಾಗಿ ಜಾಗೃತಿಯನ್ನು ಮೂಡಿಸಲಾಗಿದೆ. ಅದರಂತೆ ಪ್ರಸ್ತುತ ನಮ್ಮ ದೇಶದಲ್ಲಿ ನಡೆಯುತ್ತಿರುವ ಅಸ್ಪೃಶ್ಯತೆ ಆಚರಣೆ, ಮಾನವ ಹಕ್ಕುಗಳ ಉಲ್ಲಂಘನೆ, ಲಿಂಗ ತಾರತಮ್ಯ, ಜಾತಿ ಪ್ರಭಾವ, ಅಧರ್ಮದ ನಡೆ ಇವೆಲ್ಲವನ್ನೂ ತಿದ್ದಿ ಸರಿದಾರಿಗೆ ತರಬೇಕಿದೆ. ಅದರೊಂದಿಗೆ ನಮ್ಮ ವಾಕ್ ಸ್ವಾತಂತ್ರ್ಯದ ಮೂಲಕ ಪ್ರಜಾಪ್ರಭುತ್ವ ತಳಹದಿಯನ್ನು ಸದೃಢಪಡಿಸುವ ಕೆಲಸ ಸಾಹಿತ್ಯ ಕ್ಷೇತ್ರದಿಂದ ಆಗಬೇಕಿದೆ ಎಂದು ನುಡಿದರು.

ಮರ್ಯಾದೆ ಹತ್ಯೆಯಂತಹ ಪ್ರಕರಣ ಇಡೀ ಮಾನವ ಕುಲ ತಲೆತಗ್ಗಿಸುವಂತದ್ದು. ಇಂತಹ ಅನೇಕ ಅನಿಷ್ಟ ಪದ್ದತಿಗಳನ್ನು ಖಂಡಿಸುವ ಮೂಲಕ ನಿರ್ಮೂಲನೆ ಮಾಡಬೇಕು. ಸಾಹಿತ್ಯ ಎಲ್ಲಾ ಅನಿಷ್ಟ ಪದ್ಧತಿಗಳಿಗೆ ಹರಿತವಾದ ಬರವಣಿಗೆ ಮ‌ೂಲಕ ನಿರ್ಮೂಲನೆ ಮಾಡುವ ಪ್ರಯತ್ನ ಮಾಡಬೇಕು. ಮನುಷ್ಯರು ನೆಮ್ಮದಿಯಿಂದ ಬಾಳುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟರು.

ಖ್ಯಾತ ಕವಯಿತ್ರಿ ಮಾಲತಿ ಶೆಟ್ಟಿ ಅವರು ಮಾತನಾಡಿ, ವಿವಿಧ ವೇದಿಕೆಗಳಲ್ಲಿ ದಸರಾ ಕವಿಗೋಷ್ಠಿಗಳು ನಡೆಯಲಿದ್ದು, ದಸರಾ ವೇದಿಕೆಯು ಕವಿಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿವೆ. ಕನ್ನಡದ ಹಿರಿಯ ಕವಿಗಳು ಕನ್ನಡ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಕವಿಯಾದವರಿಗೆ ಆಂತರಿಕ ಪ್ರತಿಭೆಯ ಜ್ಯೋತಿ ಇರುತ್ತದೆ. ಸಾಹಿತ್ಯದ ಸೃಷ್ಟಿಗೆ ನಿರಂತರ ಅಧ್ಯಯನದ ಅವಶ್ಯಕತೆ ಇದೆ. ಸಂತೋಷವಾದಾಗ ಅಥವಾ ದುಃಖವಾದಾಗ ಮನಸ್ಸು ನನ್ನನ್ನು ಕೊಂಡೊಯ್ಯುವುದು ಕವಿತೆಯೆಡೆಗೆ ಎಂದು ಸಾಹಿತ್ಯದ ಮೇಲಿನ ಒಲವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಿಧಾನ ಪರಿಷತ್ತಿನ ಸದಸ್ಯ ಹೆಚ್.ವಿಶ್ವನಾಥ್, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪ, ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕವಿಗೋಷ್ಠಿ ಉಪಸಮಿತಿಯ ಉಪ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ, ಕಾರ್ಯಾಧ್ಯಕ್ಷರಾದ ಡಾ.ವಿಜಯಕುಮಾರಿ ಎಸ್. ಕರಿಕಲ್, ಕಾರ್ಯದರ್ಶಿ ಎಂ.ಎಸ್.ಗಿರಿಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

You Might Also Like

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು : ಸಿಎಂ ಸಿದ್ದರಾಮಯ್ಯ

ಬಿಜೆಪಿ ಎರಡನೇ ಪಟ್ಟಿ ಪ್ರಕಟ ಮೈಸೂರಿನಿಂದ ಯದುವೀರ್ ಚಾಮರಾಜನಗರದಿಂದ ಬಾಲರಾಜ್ ತುಮಕೂರಿನಿಂದ ವಿ.ಸೋಮಣ್ಣ ಸ್ಪರ್ಧೆ

ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ : ಯಡಿಯೂರಪ್ಪ

ಆಕಸ್ಮಿಕ ಬೆಂಕಿ ಅನಾಹುತಕ್ಕೆ ಜೋಳದ ಕಡ್ಡಿ ಮೆದೆ ಭಸ್ಮ

ಮೈಸೂರು ಕೊಡಗು ಲೋಕಸಭಾ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಫೈನಲ್

TAGGED: Dasara Mysuru Kavigosti
admin October 17, 2023
Share this Article
Facebook Twitter Whatsapp Whatsapp LinkedIn Copy Link
Previous Article ರಾಜ್ಯ ಸರ್ಕಾರದ ವಿರುದ್ಧ ರಸ್ತೆ ತಡೆದು ಸಂತೇಮರಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ
Next Article ಟೌನ್ ಹಾಲ್ ಬಳಿ ನೂತನ ಪಾರ್ಕಿಂಗ್ ನಾಳೆ ಉದ್ಘಾಟನೆ – ಮೇಯರ್ ಶಿವಕುಮಾರ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?