• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾರಾಗೃಹಗಳು ಬಂದಿಕಾನೆ ಆಗಬಾರದು – ಬಿ.ಎಸ್ ಸುರೇಶ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕಾರಾಗೃಹಗಳು ಬಂದಿಕಾನೆ ಆಗಬಾರದು – ಬಿ.ಎಸ್ ಸುರೇಶ್
ಜಿಲ್ಲೆಮೈಸೂರು

ಕಾರಾಗೃಹಗಳು ಬಂದಿಕಾನೆ ಆಗಬಾರದು – ಬಿ.ಎಸ್ ಸುರೇಶ್

admin
Last updated: 2023/10/20 at 9:59 AM
admin
Share
3 Min Read
SHARE

ಮೈಸೂರು : ಇತ್ತೀಚಿನ ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀಕ್ಷಕರಾದ ಬಿ.ಎಸ್ ರಮೇಶ್ ಅವರು ತಿಳಿಸಿದರು.

ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ಯೋಗದಸರ ಉಪ ಸಮಿತಿಯಿಂದ ಆಯೋಜಿಸಿದ್ದ ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮ ಮಾತನಾಡಿದ ಅವರು ಆರೋಗ್ಯ ತನ್ನಿಂದ ತಾನೇ ಬರುವಂತಹ ವಸ್ತುವಲ್ಲ ಅದಕ್ಕೆ ನಿರ್ವಹಣೆಯ ಅವಶ್ಯಕತೆ ಇದೆ. ನಮ್ಮ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಯೋಗ ಅತಿ ಅವಶ್ಯಕ. ನಾಡ ಹಬ್ಬ ಮೈಸೂರು ದಸರಾ ಸವಿ ನೆನಪು ಕಟ್ಟಿಕೊಳ್ಳಲು ಇಂದು ನಮ್ಮ ಕಾರಾಗೃಹದಲ್ಲಿ ವಿಶಿಷ್ಟ ಯೋಗ ಅಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಂದು ವಿನೂತನ ಪ್ರಯತ್ನ ಎಂದರು.

ದಸರಾ ಉತ್ಸವದ ಜೊತೆಗೆ ಯೋಗದ ಉಪ ಸಮಿತಿ ಈ ಬಾರಿ ಯೋಗ ಉತ್ಸವವನ್ನು ಮಾಡುತ್ತಿದೆ.ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರಾಗೃಹದಲ್ಲಿ ವಾಸಿಸುವ ನೀವುಗಳು ಅಲ್ಪ ಕಾಲಕ್ಕೆ ಮಾತ್ರ ಇಲ್ಲಿ ವಾಸಿಸುತ್ತೀರಾ. ಹಾಗಾಗಿ ಯಾವುದು ಕ್ಷಣಾರ್ಧದಲ್ಲಿ ಮಾಡಿದ ತಪ್ಪಿಗೆ ಸೆರೆಮನೆಯ ವಾಸವನ್ನು ಅನುಭವಿಸುತ್ತಿದ್ದೀರಿ. ಇಲ್ಲಿಂದ ಹೊರಡುವ ಮುನ್ನ ಮನಃಪರಿವರ್ತನೆ ಮಾಡಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಒಳ್ಳೆಯದನ್ನು ಬಯಸುವಂತಹ ಮನಸ್ಸನ್ನು ಇಟ್ಟು ಹೊರಡಬೇಕು. ವಿವಿಧ ಸಂಘ ಸಂಸ್ಥೆಗಳ ಅಡಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮಲ್ಲಿರುವ ಒಳ್ಳೆಯ ಗುಣಗಳನ್ನು ಪೋಷಣೆ ಮಾಡಿ ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ಮಾಡುವ ಪ್ರಯತ್ನವನ್ನು ಇಂದಿನ ಕಾರಾಗೃಹಗಳು ಮಾಡುತ್ತಿವೆ ಎಂದರು.

ಧಾರ್ಮಿಕ ಉಪನ್ಯಾಸಗಳು, ಕ್ರೀಡೆ ಕುರಿತಾದ ಕಾರ್ಯಕ್ರಮಗಳು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಕಾರಾಗೃಹದಲ್ಲಿ ಏರ್ಪಡಿಸುವ ಮೂಲಕ ನಿಮ್ಮನ್ನು ಕೂಡ ಸಮಾಜಕ್ಕೆ ಸೇರಿಸುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಆರೋಗ್ಯದ ಭಾಗವಾಗಿ ಯೋಗವನ್ನು ನಿರ್ವಹಿಸಿ ಆರೋಗ್ಯವಂತ ಸಮಾಜಕ್ಕಾಗಿ ಶ್ರಮಿಸಬೇಕು. ಪ್ರತಿನಿತ್ಯವೂ ಕೂಡ ಕಾರಾಗೃಹದಲ್ಲಿ ಯೋಗವನ್ನು ಮಾಡುವುದರ ಮೂಲಕ ಧನಾತ್ಮಕ ಪರಿವರ್ತನೆಯಾಗಿ ಕಾರಾಗೃಹದಿಂದ ಮುಕ್ತಿ ಹೊಂದಿರಿ ಎಂದು ತಿಳಿಸಿದರು.

ಯೋಗದಸರದ ಉಪ ಸಮಿತಿಯ ಅಧ್ಯಕ್ಷರಾದ ದೇವರಾಜ ರವರು ಮಾತನಾಡಿ ನಿಮ್ಮ ಜೀವನದ ಯಾವುದೋ ಒಂದು ಕಹಿ ಘಟನೆಯಿಂದ ನೀವೆಲ್ಲರೂ ಸೆರೆಮನೆ ವಾಸವನ್ನು ಅನುಭವಿಸುತ್ತಿದ್ದೀರಾ. ಮನುಷ್ಯನಾದವನು ಕಹಿ ಘಟನೆ ಮತ್ತು ಕಹಿ ಕ್ಷಣಗಳನ್ನು ಮರೆತು ಮುಂದೆ ಸಾಗಬೇಕು. ಅದೇ ರೀತಿಯಾಗಿ ನೀವು ಕೂಡ ಇಲ್ಲಿಂದ ಹೊರಡುವಾಗ ಉತ್ತಮ ನಾಗರಿಕರಾಗಿ ಹೊರಡಬೇಕು. ಯೋಗವು ಮನುಷ್ಯನನ್ನು ಹೇಗೆ ಬದಲಾಯಿಸುತ್ತದೆ ಎಂಬುವುದರ ಬಗ್ಗೆ ತಿಳಿಯಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಳೆದ ಒಂದು ತಿಂಗಳಿಂದ ನೀವೆಲ್ಲರೂ ಯೋಗಭ್ಯಾಸವನ್ನು ಮಾಡಿದ್ದೀರಿ ನಿಮ್ಮಲ್ಲಿ ಸ್ವಲ್ಪಮಟ್ಟಿಗಾದರೂ ಬದಲಾವಣೆ ಆಗಿದೆ ಎಂದು ಭಾವಿಸಿದ್ದೇನೆ. ಪ್ರತಿನಿತ್ಯವೂ ಯೋಗ ಮಾಡುವುದರ ಮೂಲಕ ಋಣಾತ್ಮಕ ಚಿಂತನೆಯನ್ನು ತೊಳಗಿಸಿ ಧನಾತ್ಮಕ ಚಿಂತನೆಯತ್ತ ಮುಖ ಮಾಡಿ ಎಂದರು.

ಯೋಗಭ್ಯಾಸದ ಕುರಿತು ಅಭಿಪ್ರಾಯ ಹಂಚಿಕೊಂಡ ಕಾರಾಗೃಹದ ವಾಸಿಗಳು ಯೋಗದಿಂದ ನಮ್ಮ ಮನಸ್ಸು ದೇಹ ಸಮ ಸ್ಥಿತಿಯಲ್ಲಿರುತ್ತದೆ. ಧ್ಯಾನದ ಮೂಲಕ ನಮ್ಮ ಮಾನಸಿಕ ಚಿಂತೆಯನ್ನು ದೂರ ಮಾಡಬಹುದು. ಯೋಗವು ಸಕಲ ರೋಗಗಳಿಂದ ಸಂರಕ್ಷಣೆಯ ಮಂತ್ರವಾಗಿದೆ. ಮುಂದಿನ ದಿನಗಳಲ್ಲಿ ಯೋಗವನ್ನು ಚಿಕ್ಕ ವಯಸ್ಸಿನಿಂದ ಅಭ್ಯಾಸ ಮಾಡುವುದು ಉತ್ತಮ. ಹೀಗೆ ಮಾಡಿದರೆ ದೀರ್ಘಾಯುಷಿಯಾಗಿ ಬದುಕಬಹುದು. ಪೂಜೆಗೆ ಒಂದು ದೇವಾಲಯ, ಓದಿಗೊಂದು ಗ್ರಂಥಾಲಯ, ಅದೇ ರೀತಿಯಾಗಿ ಉತ್ತಮ ಆರೋಗ್ಯಕ್ಕಾಗಿ ಒಂದು ಯೋಗಾಲಯವಿರಬೇಕು ಎಂದು ತಿಳಿಸಿದರು.

ಕಳೆದ ಒಂದು ತಿಂಗಳಿಂದ ಕಾರಾಗೃಹದಲ್ಲಿ ಯೋಗ ತರಬೇತಿಯನ್ನು SPYSS ಸಂಸ್ಥೆಯಿಂದ ನೀಡಲಾಗಿತ್ತು. ಸುಮಾರು 300 ಸೆರೆಮನೆ ವಾಸಿಗರು ಎರಡು ಗಂಟೆಗಳ ಕಾಲ ಯೋಗವನ್ನು ಅಭ್ಯಾಸ ಮಾಡಿದರು. ಚಾಮರಾಜನಗರ ಜಿಲ್ಲಾ ಆಡಳಿತ, ಆಯುಷ್ ಸಂಸ್ಥೆಯ ಸದಸ್ಯರು, ದಸರಾ ಯೋಗ ಉಪಸಮಿತಿಯ ಸದಸ್ಯರು ಎಲ್ಲರೂ ಕೂಡ ಯೋಗ ಮಾಡಿ ಸಿಹಿ ಹಂಚಿ ಯೋಗ ದಸರಾವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಕಾರಾಗೃಹದ ಕಾರ್ಯನಿರ್ವಾಹದ ದಾಮೋದರ್ ,ಯೋಗ ದಸರಾ ಉಪ ಸಮಿತಿಯ ಉಪಾಧ್ಯಕ್ಷರಾದ ಮಹೇಶ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಕೆ ರಮ್ಯಾ, ಯೋಗ ದಸರಾ ಉಪ ಸಮಿತಿಯ ಕಾರ್ಯಧ್ಯಕ್ಷರಾದ ಡಿ.ಎಮ್ ರಾಣಿ, ಹಾಗೂ ಕಾರ್ಯದರ್ಶಿ ಡಾ.ಪುಷ್ಪಾ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಯೋಗ ಶಿಕ್ಷಣ ಮತ್ತು ಸಂಶೋಧನೆಯ ಸದಸ್ಯರು, ಮತ್ತು ಯೋಗ ದಸರಾ ಉಪ ಸಮಿತಿಯ ಸದಸ್ಯರು ಹಾಜರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Dasara
admin October 20, 2023
Share this Article
Facebook Twitter Whatsapp Whatsapp LinkedIn Copy Link
Previous Article ಚುನಾವಣೆ ಹಿನ್ನಲೆ ಐಟಿ ದಾಳಿ ಆಗ್ತಿದೆ – ಸಚಿವ ಸಂತೋಷ್ ಲಾಡ್
Next Article ಪ್ರಗತಿಪರ ರೈತರನ್ನು ಸನ್ಮಾನಿಸಿದ ಸಚಿವ ಮಹದೇವಪ್ಪ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?