• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾವ್ಯ ಮನರಂಜನೆಗಾಗಿ ಅಲ್ಲ ಸಮಾಜದ ಸುಧಾರಣೆಗಾಗಿ – ಕವಯತ್ರಿ ಶಶಿಕಲಾ ವಸ್ತ್ರದ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕಾವ್ಯ ಮನರಂಜನೆಗಾಗಿ ಅಲ್ಲ ಸಮಾಜದ ಸುಧಾರಣೆಗಾಗಿ – ಕವಯತ್ರಿ ಶಶಿಕಲಾ ವಸ್ತ್ರದ
ಜಿಲ್ಲೆಮೈಸೂರು

ಕಾವ್ಯ ಮನರಂಜನೆಗಾಗಿ ಅಲ್ಲ ಸಮಾಜದ ಸುಧಾರಣೆಗಾಗಿ – ಕವಯತ್ರಿ ಶಶಿಕಲಾ ವಸ್ತ್ರದ

admin
Last updated: 2023/10/21 at 10:05 AM
admin
Share
3 Min Read
SHARE

ಮೈಸೂರು : ಕಾವ್ಯ ಮನರಂಜನೆಗಾಗಿ ಅಲ್ಲ, ಅದು ಸಮಾಜದ ಸುಧಾರಣೆಗೆ ಬಹಳ ಪ್ರಮುಖ ಅಸ್ತ್ರ ಎಂದು ನಾಡಿನ ಖ್ಯಾತ ಕವಯಿತ್ರಿ ಶಶಿಕಲಾ ವಸ್ತ್ರದ ಅವರು ತಿಳಿಸಿದರು.

ಇಂದು ನಗರದ ಕಲಾಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕವಿಗಳು ಹಾಗೂ ಕವಿತೆಗಳು ಜೀವಂತವಾಗಿರುವ ಈ ಕಾಲವೇ ಸುವರ್ಣಕಾಲ. ಮೈಸೂರು ದಸರಾ ಮಹೋತ್ಸವದ ಅವಿಭಾಜ್ಯ ಅಂಗವಾಗಿ ಕವಿಗೋಷ್ಠಿಯನ್ನು ನಡೆಸಲಾಗುತ್ತಿದೆ. ನಮಗೆ ಕಾವ್ಯ ಯಾಕೆ ಬೇಕು ಎಂಬುದರ ಬಗ್ಗೆ ನಾವು ಅರಿಯಬೇಕು. ಕಾವ್ಯ ಕೇವಲ ಮನರಂಜನೆಗಾಗಿ ಅಲ್ಲ. ಸೌಹಾರ್ದತೆ, ಸದ್ಭಾವನೆ, ಸದಭಿರುಚಿಗಳನ್ನು ಬೆಳೆಸುವಲ್ಲಿ ನಾವು ಮನಸ್ಸಿಗೆ ಒತ್ತು ನೀಡಬೇಕು. ಆತ್ಮಕ್ಕೆ ನೆಮ್ಮದಿ ಮುಖ್ಯ, ಸಾಹಿತ್ಯ ಅದನ್ನು ಒದಗಿಸುತ್ತದೆ ಎಂದು ತಿಳಿಸಿದರು.

ನಾಡು ನುಡಿ ಹಾಗೂ ಸಂಸ್ಕೃತಿ ಉಳಿದರೆ ನಮ್ಮ ಕನ್ನಡದ ಅಸ್ತಿತ್ವ ಉಳಿಯುತ್ತದೆ. ನಮ್ಮ ಭಾಷೆ ಸಂಸ್ಕೃತಿ ಸಾಹಿತ್ಯ ಉಳಿಸಿಕೊಳ್ಳುವುದು ಅನಿವಾರ್ಯ ಇದನ್ನು ನಾವು ಮನನ ಮಾಡಿಕೊಳ್ಳಬೇಕು ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲ ಕನ್ನಡಿಗರದ್ದು. ಯಾವ ಭಾಷೆಯನ್ನು ನಾವು ಹೆಚ್ಚು ಬಳಸುವುದಿಲ್ಲವೋ ಆ ಭಾಷೆ ಹೆಚ್ಚು ಬದುಕುವುದಿಲ್ಲ ಎಂಬ ಹಿರಿಯರ ಮಾತಿನಂತೆ, ಕನ್ನಡ ಭಾಷೆ ನಮ್ಮ ತಾಯಿ, ಅದಿಲ್ಲದೆ ನಮ್ಮ ಬದುಕಿಲ್ಲ. ಯಾವುದೇ ರಾಜ್ಯಕ್ಕೆ ಹೋದರು ಅಲ್ಲಿ ಆ ರಾಜ್ಯದವರು ಆ ರಾಜ್ಯದ ಭಾಷೆಯನ್ನು ಬಿಟ್ಟು ಬೇರೆ ಭಾಷೆಯಲ್ಲಿ ಮಾತನಾಡುವುದಿಲ್ಲ. ಆದರೆ ನಮ್ಮಲ್ಲಿ ಹೊರ ರಾಜ್ಯದವರ ಜೊತೆ ಸಂವಹನ ಮಾಡುವಾಗ ಬಹುತೇಕ ಅವರ ಭಾಷೆಯಲ್ಲಿ ಮಾತನಾಡಲು ಪ್ರಯತ್ನಿಸುತ್ತೇವೆ. ಇತರ ಭಾಷೆಗಳನ್ನು ಕಲಿಯುವುದು ಸಂತೋಷ ಆದರೆ ನಮ್ಮ ಭಾಷೆಯನ್ನು ಉಳಿಸಿಕೊಳ್ಳುವುದು ಜವಾಬ್ದಾರಿ ಎಂದರು.

ಕಾವ್ಯದ ರಚನೆಯಷ್ಟೇ ಕಾವ್ಯದ ಬಗ್ಗೆ ಮಾತನಾಡುವುದು ಕಷ್ಟ. ಕಾವ್ಯದ ಬಗ್ಗೆ ಮಾತನಾಡುವ ಕವಿಯ ಅಂತಃಕರಣ ಹಾಗೂ ಏಕಾಗ್ರತೆ ಬಹಳ ಮುಖ್ಯ. ನೊಂದವರಿಗೆ, ಸಂಕಷ್ಟದಲ್ಲಿರುವವರಿಗೆ ಕವಿ ತನ್ನ ಕಾವ್ಯದ ಮೂಲಕ ದನಿಯಾಗಬೇಕು. ಆಯಾ ಕಾಲದ ಪರಿಸ್ಥಿತಿ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಆ ಪ್ರದೇಶದ ಪ್ರತಿನಿಧಿ ಆಗಬೇಕು. ಸಾಮಾಜಿಕ ಪ್ರಜ್ಞೆಯುಳ್ಳವನಾಗಿರಬೇಕು. ಸಾಮಾಜಿಕ ಪ್ರಜ್ಞೆ ಇಲ್ಲದವರು ಜೀವಂತ ಮೃತರು ಎಂದು ಅಭಿಪ್ರಾಯಪಟ್ಟರು.

ಕವಿತೆಗಳನ್ನು ಬರೆಯುವ ನಮ್ಮ ನವ ಕವಿಗಳಿಗೆ ಹೋರಾಟದ ಮನಸ್ಥಿತಿ ಇರಬೇಕು. ಆತ್ಮಗೌರವ, ತಾಯ್ತನ, ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ, ರೈತರ, ದಲಿತರ, ಮಹಿಳೆಯರ ನೊಂದವರ ಮಾತು ಆಲಿಸಿ ಅವರ ನೋವಿಗೆ ದನಿಯಾಗಬೇಕು ಎಂದು ನಾಡಿನ ನವ ಕವಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ.ಲೋಕನಾಥ್ ಅವರು ಮಾತನಾಡಿ, ಈ ಬಾರಿಯ ಕವಿಗೋಷ್ಠಿಯು ನಮ್ಮ ದಸರ ಸಂಭ್ರಮವನ್ನು ಹೆಚ್ಚಿಸಿದೆ. ಕವಿಗಳು ಕಂಡ ದಸರಾ ಬಹಳ ವಿಶಿಷ್ಟವಾಗಿದೆ, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಇಡೀ ರಾಷ್ಟ್ರಕ್ಕೆ ಮೈಸೂರು ಮಾದರಿಯಾಗುವಂತೆ ಮಾಡಿತು. 1600 ನೇ ಇಸವಿಯಿಂದ ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ದಸರಾ ಸಂಭ್ರಮ ಇಂದಿಗೂ ಬಹಳ ವಿಜೃಂಭಣೆಯಿಂದ ನಡೆಯುತ್ತಾ ಬಂದಿದೆ. ಭಾಷೆಯನ್ನು ಬಳಸುವ ಅತ್ಯುತ್ತಮ ಘಟ್ಟ ಕಾವ್ಯ ರಚನೆಯಾಗಿದೆ ಎಂದರು.

2023 ರ ನವೆಂಬರ್ ಇದರಿಂದ 2024 ರ ನವೆಂಬರ್ ತಿಂಗಳವರೆಗೆ ಕರ್ನಾಟಕ ಸಂಭ್ರಮ ವರ್ಷಾಚರಣೆಯನ್ನು ಆಚರಿಸಲಿದ್ದೇವೆ. ಇದು ನಮ್ಮೆಲ್ಲರಿಗೂ ಸಂತಸದ ವಿಷಯ. ಕನ್ನಡ ಭಾಷೆಯಲ್ಲಿರುವ ಶಕ್ತಿ ವಿಶೇಷವಾಗಿದ್ದು, ಸಮಾಜವನ್ನು ಸುಸ್ಥಿತಿಗೆ ತರುವಲ್ಲಿ ಸಾಹಿತ್ಯದ ಪ್ರಭಾವ ಬಹಳಷ್ಟಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಖ್ಯಾತ ಕವಿಗಳಾದ ಮೂಡ್ನಾಕೂಡು ಚಿನ್ನಸ್ವಾಮಿ ಯವರು ಅಧ್ಯಕ್ಷತೆ ವಹಿಸಿದ್ದು, ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಶರಣಪ್ಪ ವಿ ಹಲಸೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ದಸರಾ ಕವಿಗೋಷ್ಠಿ ಉಪ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ. ಎಂ ದಾಸೆಗೌಡ, ಕಾರ್ಯಧ್ಯಕ್ಷರಾದ ವಿಜಯಕುಮಾರ್ ಎಸ್ ಕರಿಕಲ್, ಅಧ್ಯಕ್ಷರಾದ ಮಹೇಶ್, ಉಪಾಧ್ಯಕ್ಷರಾದ ದಂಡಿಕೆರೆ ನಾಗರಾಜ್ ಹಾಗೂ ರವಿಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Dasara kavigosti
admin October 21, 2023
Share this Article
Facebook Twitter Whatsapp Whatsapp LinkedIn Copy Link
Previous Article ಟ್ವಿಟರ್ ನಲ್ಲಿ 50 ಸಾವಿರ ದಾಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫಾಲೋವರ್ಸ್ ಸಂಖ್ಯೆ
Next Article ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?