• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನವೆಂಬರ್ 4ರ ವರೆಗೆ ದಸರಾ ದೀಪಾಲಂಕಾರ ಪೊಲೀಸ್ ಆಯುಕ್ತ ರಮೇಶ್ ಬನೋತ್ ಮಾಹಿತಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ನವೆಂಬರ್ 4ರ ವರೆಗೆ ದಸರಾ ದೀಪಾಲಂಕಾರ ಪೊಲೀಸ್ ಆಯುಕ್ತ ರಮೇಶ್ ಬನೋತ್ ಮಾಹಿತಿ
ಜಿಲ್ಲೆಮೈಸೂರು

ನವೆಂಬರ್ 4ರ ವರೆಗೆ ದಸರಾ ದೀಪಾಲಂಕಾರ ಪೊಲೀಸ್ ಆಯುಕ್ತ ರಮೇಶ್ ಬನೋತ್ ಮಾಹಿತಿ

admin
Last updated: 2023/10/27 at 6:47 AM
admin
Share
3 Min Read
SHARE

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರ ಅವಧಿಯನ್ನು ನ.೪ ರವರೆಗೆ ವಿಸ್ತರಿಸಲಾಗಿದೆ. ಅ. ೨೫ ರಿಂದ ನ. ೪ ರವರೆಗೆ ಪ್ರತಿದಿನ ಸಂಜೆ ೪ ರಿಂದ ರಾತ್ರಿ ೧೧ ಗಂಟೆಯವರೆಗೆ ನಗರದಲ್ಲಿ ವಾಹನ ಸಂಚಾರದಟ್ಟನೆ ಅಧಿಕವಾಗುವುದರಿಂದ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮತ್ತು ವಾಹನ ವ್ಯವಸ್ಥೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್)-ಕುಸ್ತಿ ಅಖಾಡ ಜಂಕ್ಷನ್-ಬಿ.ಎನ್.ರಸ್ತೆ-ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)- ಆಲ್ಬರ್ಟ್ ವಿಕ್ಟರ್ ರಸ್ತೆ- ಚಾಮರಾಜ ಒಡೆಯರ್ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ)-ಕೆ.ಆರ್.ವೃತ್ತ ನ್ಯೂ ಸಯ್ಯಾಜಿರಾವ್ ರಸ್ತೆ ಕಾರ್ಪೋರೇಷನ್ ವೃತ್ತ- ಬಸವೇಶ್ವರ ವೃತ್ತ- ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ (ಗನ್ ಹೌಸ್), (ಪುರಂದರ ರಸ್ತೆಯನ್ನು ಒಳಗೊಂಡಂತೆ) ಈ ರಸ್ತೆಗಳಲ್ಲಿ ಅರಮನೆಯನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸಲು ಅವಕಾಶ ನೀಡಿರುತ್ತದೆ. ಈ ರಸ್ತೆಗಳಲ್ಲಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಕೆ.ಆರ್.ವೃತ-ಆಯುರ್ವೇದಿಕ್ ವೃತ-ನೆಹರು ವೃತ್ತ ಚಾಮರಾಜ ಒಡೆಯರ್ ವೃತ್ತ (ಓಲ್ ಸ್ಟ್ಯಾಚ್ಯು ವೃತ್ತ)- ಕೆ.ಆರ್.ವೃತ್ತ: ಕೆ.ಆರ್.ವೃತ್ತ-ನ್ಯೂ ಸಯ್ಯಾಜಿರಾವ್ ರಸ್ತೆ- ಬಾಬಾ ಜಂಕ್ಷನ್ -ಆಯುರ್ವೇದಿಕ್ ವೃತ್ತ-ಇರ್‍ವಿನ್ ರಸ್ತೆ, ನೆಹರು ವೃತ್ತ ಅಶೋಕ ರಸ್ತೆ – ಮಹಾವೀರ ವೃತ್ತ (ದೊಡ್ಡ ಗಡಿಯಾರ)ಚಾಮರಾಜ ಒಡೆಯರ್ ವೃತ್ತ (ಓಲ್ಡ್ ಸ್ಟಾಚ್ಯು ವೃತ್ತ)- ಕೆ.ಆರ್.ವೃತ್ತ ಈ ರಸ್ತೆಗಳ ಮಧ್ಯ ಇರುವ ಪ್ರದೇಶವನ್ನು ಮಧ್ಯ ಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ. ಗಡಿಯಾರದ ಮುಳ್ಳು ಸುತ್ತುವ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ.

ಎನ್.ಮಾಧವರಾವ್‌ವೃತ್ತ (ಅಗ್ರಹಾರ ವೃತ್ತ) ದಿಂದ ಉತ್ತರಕ್ಕೆ ತ್ಯಾಗರಾಜ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆಯವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಚಾಮರಾಜ ಜೋಡಿ ರಸ್ತೆಯಿಂದ ತ್ಯಾಗರಾಜ ರಸ್ತೆಯಲ್ಲಿ ಎನ್.ಮಾಧವರಾವ್ ವೃತ್ತ (ಅಗ್ರಹಾರ ವೃತ್ತ) ದವರೆಗೆ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಸರ್ಕಸ್ ಮೈದಾನದ ಜಂಕ್ಷನ್‌ನಿಂದ ಪೂರ್ವದಿಂದ ಪಶ್ಚಿಮಕ್ಕೆ ಜಯಚಾಮರಾಜ ಒಡೆಯರ್ ವೃತ್ತದ (ಹಾರ್ಡಿಂಜ್ ವೃತ್ತ) ವರೆಗೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಿರುತ್ತದೆ. ಎಸ್.ಅಂಗಣ್ಣ ವೃತ್ತದಿಂದ (ಚಿರಾಗ್ ಜಂಕ್ಷನ್) ಪೂರ್ವಕ್ಕೆ ಸರ್ಕಸ್ ಮೈದಾನದವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಚಂದ್ರಗುಪ್ತ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ ಅಶೋಕ ರಸ್ತೆ ಜಂಕ್ಷನ್‌ವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ನ.೪ರವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಲಿಕವಾಗಿ ರದ್ದುಗೊಳಿಸಿ, ಅಶೋಕ ರಸ್ತೆಯಿಂದ ಬಿ.ಎನ್.ರಸ್ತೆ ಜಂಕ್ಷನ್‌ವರೆಗೆ ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಅಶೋಕ ರಸ್ತೆಯಲ್ಲಿ ದಾವೂದ್‌ಖಾನ್ ರಸ್ತೆ ಜಂಕ್ಷನ್ (ಗಾಂಧಿ ಮೆಡಿಕಲ್ಸ್) ಇಂದ ನೆಹರು ಸರ್ಕಲ್‌ವರೆಗೆ ದಕ್ಷಿಣಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. – ಅಶೋಕ ರಸ್ತೆಯಲ್ಲಿ ನೆಹರು ಸರ್ಕಲ್‌ನಿಂದ ದಾವೂದ್‌ಖಾನ್ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬನುಮಯ್ಯ ರಸ್ತೆಯಲ್ಲಿ ಚಾಮರಾಜ ಜೋಡಿ ರಸ್ತೆ ಜಂಕ್ಷನ್‌ನಿಂದ ಬನುಮಯ್ಯ ಚೌಕದವರೆಗೆ ಚಾಮರಾಜ ಜೋಡಿ ರಸ್ತೆಯಿಂದ ಬನುಮಯ್ಯ ಚೌಕದವರೆಗೆ ಉತ್ತರಕ್ಕೆ ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬನುಮಯ್ಯ ಚೌಕದಿಂದ ಚಾಮರಾಜ ಜೋಡಿ ರಸ್ತೆ ವರೆಗೆ ಉತ್ತರದಿಂದ ದಕ್ಷಿಣಕ್ಕೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇಟ್ಟಿಗೆ ಗೂಡಿನ ೫ನೇ ಕ್ರಾಸ್ ರಸ್ತೆಯಲ್ಲಿ ಮೃಗಾಲಯದ ರಸ್ತೆ ಜಂಕ್ಷನ್‌ನಿಂದ ವಸ್ತು ಪ್ರದರ್ಶನ ಮೈದಾನದ ಪೂರ್ವ ದ್ವಾರದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಾನಸ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಲೋಕರಂಜನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಮಲೆಮಹದೇಶ್ವರ ರಸ್ತೆಯಲ್ಲಿ ಬಿ.ಎನ್.ರಸ್ತೆ ಜಂಕ್ಷನ್‌ನಿಂದ (ಛತ್ರಿ ಮರ) ಪೂರ್ವಕ್ಕೆ ಚನ್ನಯ್ಯ ವೃತ್ತದವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Dasara Lightings
admin October 27, 2023
Share this Article
Facebook Twitter Whatsapp Whatsapp LinkedIn Copy Link
Previous Article ಚಂದ್ರಗ್ರಹಣ ಹಿನ್ನಲೆ ನಾಳೆ ಸಂಜೆ ಚಾಮುಂಡಿ ಬೆಟ್ಟ ಬಂದ್ !
Next Article ಮೂರು ತಿಂಗಳಲ್ಲಿ ಮೈಸೂರು ಮೆಡಿಕಲ್ ಕಾಲೇಜು ಸಮಸ್ಯೆ ಬಗೆಹರಿಸುತ್ತೇನೆ – ಸಚಿವ ಶರಣ ಪ್ರಕಾಶ್ ಪಾಟೀಲ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?