ಬೆಂಗಳೂರು : ಇಂದಿನಿಂದ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, ಈಗ 7 ಗಂಟೆ ವಿದ್ಯುತ್ ನೀಡಲು ನಿರ್ಧರಿಸಿದ್ದೇವೆ ಎಂದರು.
ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳದವರು ನಮಗೆ ಭತ್ತ ಬೆಳೆಯಲು 7 ಗಂಟೆ ವಿದ್ಯುತ್ ಕೊಡಿ ಅಂತಾ ಮನವಿ ಮಾಡಿದ್ದರು. ಮುಂಚೆ 5 ಗಂಟೆ ವಿದ್ಯುತ್ ಕೊಡುತ್ತಿದ್ದ ಪ್ರದೇಶದಲ್ಲೂ 7 ಗಂಟೆ ಕೊಡೋದಕ್ಕೆ ನಿರ್ಧಾರ ಮಾಡಿದ್ದೇವೆ. ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಪವರ್ ಉತ್ಪಾದನೆಯಾಗ್ತಿದೆ ಎಂದಿದ್ದಾರೆ.