• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ – ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ – ಸಿದ್ದರಾಮಯ್ಯ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ – ಸಿದ್ದರಾಮಯ್ಯ

admin
Last updated: 2023/11/14 at 6:55 AM
admin
Share
2 Min Read
SHARE

ಬೆಂಗಳೂರು : ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ, ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಕೃಷಿ ಅಭಿವೃದ್ಧಿ ನೆಹರೂ ಅವರ ದೂರದೃಷ್ಟಿಯ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

KPCC ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಇಲ್ಲಿ ಏನೇನೂ ಇರಲಿಲ್ಲ. ಶಿಕ್ಷಣ ಸಂಸ್ಥೆಗಳು ಇರಲಿಲ್ಲ. ನೀರಾವರಿ ವ್ಯವಸ್ಥೆ ಇರಲಿಲ್ಲ. ಆದರೆ ದೇಶದ ಮೊದಲ ಪ್ರಧಾನಿಯಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ, ಪ್ರಜಾಪ್ರಭುತ್ವವಾದಿ ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ ಎಂದು ಉದಾಹರಣೆಗಳ ಸಮೇತ ವಿವರಿಸಿದರು.

ಶಿಕ್ಷಣ ಸಂಸ್ಥೆಗಳು, ವಿಜ್ಞಾನ, ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟುಗಳು, ಆಸ್ಪತ್ರೆಗಳು ಸೇರಿ ಆಧುನಿಕ ಭಾರತದ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ಕ್ಷೇತ್ರಗಳನ್ನೂ ವಿಶ್ವ ಮಟ್ಟದ ಗುಣಮಟ್ಟದಲ್ಲಿ ಆಗಿನ ಕಾಲಕ್ಕೇ ಸ್ಥಾಪಿಸಿದ್ದರು ಎಂದು ಸ್ಮರಿಸಿದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು ಅಷ್ಟೆ. ಇವರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿ ತಪ್ಪಿಯೂ ಹೋರಾಡಿದವರಲ್ಲ. ಒಬ್ಬೇ ಒಬ್ಬ ಬಿಜೆಪಿ ಪರಿವಾರದ ಸದಸ್ಯ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲು ಸೇರಿಲ್ಲ ಎಂದು ವ್ಯಂಗ್ಯವಾಡಿದರು.

ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ ಎನ್ನುವ ಕೀಳರಿಮೆ ಮತ್ತು ಅಳುಕಿನಿಂದ ಸ್ವಾತಂತ್ರ್ಯ ಹೋರಾಟಗಾರರಾಗಿ 9 ವರ್ಷ ಜೈಲು ವಾಸ ಅನುಭವಿಸಿ 17 ವರ್ಷ ದೇಶದ ಪ್ರಧಾನಿ ಆಗಿದ್ದ ನೆಹರೂ ಅವರನ್ನು ಆಡಿಕೊಳ್ಳುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನೆಹರೂ ಅವರಿಗೆ ಅಪಾರ ನಂಬಿಕೆ ಇತ್ತು‌. 17 ವರ್ಷಗಳ ಕಾಲ ಪ್ರಧಾನಿ ಆಗಿದ್ದ ನೆಹರೂ ಅವರು ಚರ್ಚೆ, ಸಂವಾದದಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶ್ರಮಿಸುವವರ ಕಟು ಟೀಕೆಗಳನ್ನೂ ಅತ್ಯಂತ ಸಹನೆಯಿಂದ ಸ್ವೀಕರಿಸುತ್ತಿದ್ದರು. ಅಷ್ಟು ದೊಡ್ಡ ವ್ಯಕ್ತಿತ್ವ ನೆಹರೂ ಅವರದ್ದಾಗಿತ್ತು. ವಿಶ್ವ ಮಟ್ಟದಲ್ಲಿ ಭಾರತ ತಲೆ ಎತ್ತಿ ನಿಲ್ಲಲು ನೆಹರೂ ಅವರು ಭಾರತ ದೇಶಕ್ಕೆ ಹಾಕಿದ ಭದ್ರ ಬುನಾದಿ ಕಾರಣ ಎಂದು ಮೆಚ್ಚುಗೆ ಸೂಚಿಸಿದರು.

ನೆಹರೂ ಈ ದೇಶದ ಅತ್ಯಂತ ಹೃದಯವಂತಿಕೆ ಇದ್ದ ಅಗ್ರಗಣ್ಯ ನಾಯಕ ಎಂದು ಬಣ್ಣಿಸಿ ಇದಕ್ಕೆ ಹಲವು ಪ್ರಸಂಗಗಳನ್ನು ಉದಾಹರಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, CWC ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah Dkshivakumar Bjp congress Jds politics Neharu
admin November 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಶುಕ್ರವಾರ ಶಾಸಕಾಂಗ ಸಭೆ ನಿಗದಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Next Article ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?