ಮೈಸೂರು : ಡಾ ಯತೀಂದ್ರ ಸಿದ್ದರಾಮಯ್ಯ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ತಾನು ನೀಡಿದ ಲಿಸ್ಟ್ನದ್ದು ಮಾತ್ರ ಆಗಬೇಕು ಸಿಎಂ ಸಿದ್ದರಾಮಯ್ಯ ಜೊತೆ ದೂರವಾಣಿ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗಿದೆ.
ಸಾರ್ವಜನಿಕರ ಮುಂದೆಯೇ ತಾನು ನೀಡಿದ ಲಿಸ್ಟ್ ಬಗ್ಗೆ ಮಾತುಕತೆ ಅಪ್ಪ ಹೇಳಿ ಅಂತಾ ಮಾತು ಶುರು ಮಾಡುವ ಡಾ ಯತೀಂದ್ರ ಸಿದ್ದರಾಮಯ್ಯ ವಿವೇಕಾನಂದ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಮಹದೇವ ಅವರಿಗೆ ಪೋನ್ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಹೇಳುವ ಡಾ ಯತೀಂದ್ರ ಮಹದೇವ್ಗೆ ದೂರವಾಣಿ ಮೂಲಕ ತರಾಟೆ ತೆಗೆದುಕೊಂಡು ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನೆ ಮಾಡಿದ್ದಾರೆ ಅಲ್ಲದೆ
ನನಗೆ ಅದೆಲ್ಲಾ ಗೊತ್ತಿಲ್ಲ ನಾನು ಕೊಟ್ಟಿರುವ ನಾಲ್ಕು ಐದು ಮಾತ್ರ ಮಾಡುವಂತೆ ಹಾಗೂ ಮಾಡಬೇಕು ಉಳಿದವನ್ನು ಬಿಡಿ ಎಂದು ಕಟ್ಟು ನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
ಡಾ ಯತೀಂದ್ರ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.