• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನನಗೆ ರಾಜಕೀಯ ಗೀಳು ಬರಲು ಪ್ರೊ ನಂಜುಂಡಸ್ವಾಮಿ ಮಲ್ಲೇಶ್ ಕಾರಣ – ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ನನಗೆ ರಾಜಕೀಯ ಗೀಳು ಬರಲು ಪ್ರೊ ನಂಜುಂಡಸ್ವಾಮಿ ಮಲ್ಲೇಶ್ ಕಾರಣ – ಸಿಎಂ ಸಿದ್ದರಾಮಯ್ಯ
ಜಿಲ್ಲೆಮೈಸೂರುರಾಜಕೀಯರಾಜ್ಯ

ನನಗೆ ರಾಜಕೀಯ ಗೀಳು ಬರಲು ಪ್ರೊ ನಂಜುಂಡಸ್ವಾಮಿ ಮಲ್ಲೇಶ್ ಕಾರಣ – ಸಿಎಂ ಸಿದ್ದರಾಮಯ್ಯ

admin
Last updated: 2023/11/18 at 12:35 PM
admin
Share
2 Min Read
SHARE

– ಮುಖ್ಯಮಂತ್ರಿಗಳಿಂದ ಪ.ಮಲ್ಲೇಶ್ ಅವರ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕ ಲೋಕಾರ್ಪಣೆ

– ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪ.ಮಲ್ಲೇಶ್ ರಚಿಸಿರುವ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ರಾಜಕೀಯದ ಗೀಳು ಬರಲು ಪ್ರೊ. ನಂಜುಂಡಸ್ವಾಮಿ ಹಾಗೂ ಮಲ್ಲೇಶ್ ಕಾರಣ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ ರಾಜಕಾರಣ ಮಾಡಬೇಕು ಎಂದು ತಿಳಿಸುತ್ತಿದ್ದರು. ರಾಜಕೀಯವಾಗಿ ನಮ್ಮ ನಡುವೆ ಆತ್ಮೀಯ ಸ್ನೇಹವಿತ್ತು. ತಪ್ಪು ಮಾಡಿದ್ದನ್ನು ಹೇಳುವ ಎದೆಗಾರಿಕೆ ಅವರಿಗೆ ಇತ್ತು ಎಂದರು.

ಮನಸ್ಸಿನಲ್ಲಿ ದ್ವೇಷ ಅಸೂಯೆಗಳಿರಲಿಲ್ಲ
ಒಮ್ಮೆ ಮಲ್ಲೇಶ್ ಅವರು ಊಟಕ್ಕೆ ಕರೆದಿದ್ದ ಸಂದರ್ಭದಲ್ಲಿ ಜೋರು ಜಗಳ ನಡೆದರೂ ಭಂಡತನದಿಂದ ಊಟ ಮುಗಿಸಿಯೇ ಹೊರಬಂದೆ ಎಂದು ಮುಖ್ಯಮಂತ್ರಿಗಳು ಸ್ವಾರಸ್ಯಕರ ಘಟನೆಯನ್ನು ಮೆಲುಕು ಹಾಕಿದರು. ಮರುದಿನವೇ ತಮ್ಮನ್ನು ಕರೆದು ಮಾತನಡಿಸುತ್ತಿದ್ದ ನಿರ್ಮಲ ಹೃದಯದ ಮಲ್ಲೇಶ್ ಅವರು ಮನಸ್ಸಿನಲ್ಲಿ ಯಾವುದೇ ದ್ವೇಷ ಅಸೂಯೆಯನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಭಾರತದ ಸಮಾಜದಲ್ಲಿ ಯಾರೂ ಅನ್ಯಾಯಕ್ಕೆ ಒಳಗಾಗಬಾರದು. ಯಾರೇ ಅನ್ಯಾಯಕ್ಕೊಳಗಾದರೂ ಅದರ ವಿರುದ್ಧ ಹೋರಾಟ ಮಾಡುವವರ ಪೈಕಿ ಮಲ್ಲೇಶ್ ಮುಂಚೂಣಿಯಲ್ಲಿರುತ್ತಿದ್ದರು ಎಂದರು.

1971 ರಲ್ಲಿ ಮಲ್ಲೇಶ್ ಅವರ ಪರಿಚಯವಾಗಿದ್ದನ್ನು ಸ್ಮರಿಸಿದ ಸಿದ್ದರಾಮಯ್ಯ ಅವರು ಮಲ್ಲೇಶ್ ಅವರೊಂದಿಗಿನ ತಮ್ಮ ಒಡನಾಟವನ್ನು ಮೆಲಕುಹಾಕಿದರು. ಪ್ರತಿ ಸೋಮವಾರ ಮಹಾರಾಜ ಕಾಲೇಜಿನ ಕ್ಯಾಂಟೀನಿನಲ್ಲಿ ನಡೆಯುತ್ತಿದ್ದ ಸ್ಟಡಿ ಸರ್ಕಲ್ ಗೆ ತೇಜಸ್ವಿ, ಅನಂತಮೂರ್ತಿ, ಟಿ.ಎನ್. ನಾಗರಾಜ್, ಮಲ್ಲೇಶ್ ಸೇರಿದಂತೆ ಇತರ ಪ್ರಮುಖ ಸಾಹಿತಿಗಳು ಭೇಟಿ ನೀಡುತ್ತಿದ್ದರು ಎಂದು ನೆನೆಸಿಕೊಂಡರು.

ಜಾತ್ಯಾತೀತ ವ್ಯಕ್ತಿ
ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಡೆದ ಹೋರಾಟಗಳ ಬಗ್ಗೆ ಸ್ವಾರಸ್ಯಕರ ಘಟನೆಗಳನ್ನು ಮುಖ್ಯಮಂತ್ರಿಗಳು ವಿವರಿಸಿದರು. ಜೀವನದುದ್ದಕ್ಕೂ ಹೋರಾಟಗಳನ್ನು ಮಾಡಿಕೊಂಡು ಬಂದ ಮಲ್ಲೇಶ್, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಸಂವಿಧಾನ, ಎಲ್ಲರಿಗೂ ನ್ಯಾಯ ಸಿಗಬೇಕೆಂದು ಮಲ್ಲೇಶ್ ಶ್ರಮಿಸುತ್ತಿದ್ದರು. ಎಂದಿಗೂ ಜಾತಿ ಮಾಡಲಿಲ್ಲ. ಜಾತ್ಯಾತೀತವಾಗಿ ಎಲ್ಲರನ್ನು ನೋಡುತ್ತಿದ್ದರು. ಅವರ ಬಳಿ ಹೋಗುತ್ತಿದ್ದವರೆಲ್ಲಾ ಕೆಳಜಾತಿಯವರೇ ಎಂದರು.

ಸಂಪೂರ್ಣ ಕ್ರಾಂತಿ ಬಗ್ಗೆ ತುಡಿತ

ದೇಶ ಒಟ್ಟಾಗಿ ಉಳಿಯಬೇಕಾದರೆ, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನೆಲೆಯೂರಬೇಕಾದರೆ, ದ್ವೇಷದ ರಾಜಕಾರಣ ಹೋಗಬೇಕಾದರೆ ಸಿದ್ದರಾಮಯ್ಯನವಂತವರೇ ಪುನ: ಮುಖ್ಯಮಂತ್ರಿಗಳಾಗಬೇಕೆಂದು ರಾಹುಲ್ ಗಾಂಧೀ ಸೇರಿದಂತೆ ಮಲ್ಲೇಶ್ ಕೂಡ ಬಯಸಿದ್ದರು. ಖಡಕ್ ಆಗಿ ಮಾತನಾಡುತ್ತಿದ್ದ ಮಲ್ಲೇಶ್, ಸಮಾಜದಲ್ಲಿ ಬದಲಾವಣೆಗೆ ಸಂಪೂರ್ಣ ಕ್ರಾಂತಿಯಾಗಬೇಕೆಂದು ಜೆಪಿ ಹೇಳಿದಂತೆ ಸಂಪೂರ್ಣ ಕ್ರಾಂತಿ ಬಗ್ಗೆ ತುಡಿತವಿತ್ತು. ಎಷ್ಟೇ ತೊಂದರೆಯಿದ್ದರೂ ಹೋರಾಟ ನಿಲ್ಲಿಸುತ್ತಿರಲಿಲ್ಲ. ರಾಜಕೀಯವಾಗಿ ಮೇಲೆ ಬರುವವರಿಗೆ ಪ್ರೋತ್ಸಾಹ ಮಾಡುತ್ತಿದ್ದರು. ಹೇಳಿದಂತೆ ನಡೆದುಕೊಳ್ಳುವ ಪ್ರಾಮಾಣಿಕ ವ್ಯಕ್ತಿ ಎಂದು ವಿವರಿಸಿದರು.

ಪುಸ್ತಕವನ್ನು ಕೊಂಡು ಓದುವಂತೆ ಸಲಹೆ ನೀಡಿದ ಸಿಎಂ,
ಮಲ್ಲೇಶ್ ಅವರು ಬಹಳಷ್ಟು ಪುಸ್ತಕಗಳನ್ನು ಬರೆಯಬಹುದಿತ್ತು. ಹೋರಾಟಕ್ಕೆ ಹೆಚ್ಚು ಸಮಯ ನೀಡಿದ್ದರಿಂದ ಹೆಚ್ಚು ಪುಸ್ತಕಗಳನ್ನು ಬರೆಯಲು ಸಾಧ್ಯವಾಗಲಿಲ್ಲ. ಸಾಹಿತ್ಯಾಸಕ್ತಿ, ಬರೆಯುವ ಆಸಕ್ತಿ ಇದ್ದರೂ, ಪುಸ್ತಕ ಬರೆಯುವಾಗ ಸಮಾಜವಾದ, ಸಂಸ್ಕøತಿ, ಭಾಷೆ ಇವುಗಳ ಬಗ್ಗೆ ಹೆಚ್ಚು ಕಾಳಜಿ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದರು ಎಂದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ತಿಮ್ಮಯ್ಯ ಪತ್ರಕರ್ತ ಜಿ.ಪಿ.ಬಸವರಾಜು, ಸವಿತಾ ಮಲ್ಲೇಶ್, ಉಗ್ರನರಸಿಂಹಗೌಡ, ಅಭಿರುಚಿ ಗಣೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Siddaramiah dkshivakumar congress jds bjp Politics
admin November 18, 2023
Share this Article
Facebook Twitter Whatsapp Whatsapp LinkedIn Copy Link
Previous Article ಇಂತಹ ಭ್ರಷ್ಟ ಸರ್ಕಾರವನ್ನು ಹಿಂದೆಂದೂ ನೋಡಿಲ್ಲ – ಶಾಸಕ ಎಸ್.ಆರ್ ವಿಶ್ವನಾಥ್
Next Article ಭೂಮಿ ಕಳೆದುಕೊಂಡ ರೈತನ ಮಕ್ಕಳಿಗೆ ಕೆಲಸ ಕೊಡದ ಕಾರಣ ರೈತ ಯುವಕ ಆತ್ಮಹತ್ಯೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?