• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ – ಬಿವೈ ವಿಜಯೇಂದ್ರ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ – ಬಿವೈ ವಿಜಯೇಂದ್ರ
ಜಿಲ್ಲೆಮೈಸೂರುರಾಜಕೀಯರಾಜ್ಯ

ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ – ಬಿವೈ ವಿಜಯೇಂದ್ರ

admin
Last updated: 2023/11/20 at 2:48 PM
admin
Share
2 Min Read
SHARE

ಮೈಸೂರು : ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಂತೆ ಪಕ್ಷವು ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ. ಯಾಕೆಂದರೆ ಅದು ಕಾರ್ಯಕರ್ತರ ಚುನಾವಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.


ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜೀ, ಪ್ರಧಾನಿ ನರೇಂದ್ರ ಮೋದಿಜೀ, ಅಮಿತ್ ಶಾಜೀ, ಸಂತೋಷ್ ಜೀ ಅವರು ಕರ್ನಾಟಕದಲ್ಲಿ ಈ ಜವಾಬ್ದಾರಿಯನ್ನು ನನಗೆ ನೀಡುತ್ತಾರೆಂದು ಯಾರೂ ಭಾವಿಸಿರಲಿಲ್ಲ. ಈಗ ಈ ಜವಾಬ್ದಾರಿ ಲಭಿಸಿದ್ದು, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಹಿರಿಯರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಮುನ್ನಡೆಸುವುದಾಗಿ ಪ್ರಕಟಿಸಿದರು.


ಸಾಮಾನ್ಯ ಕಾರ್ಯಕರ್ತನಾಗಿ ಎಲ್ಲರ ಜೊತೆ ಸೇರಿ ದುಡಿಯುವೆ. ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಕರ್ನಾಟಕವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಶ್ರಮಿಸುವೆ ಎಂದು ಅವರು ತಿಳಿಸಿದರು. ನಿನ್ನೆ ಚಾಮುಂಡಿ ತಾಯಿಯ ಆಶೀರ್ವಾದ, ಹಿರಿಯ ಸಾಹಿತಿಗಳು, ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇನೆ. ಪಕ್ಷದ ಮುಖಂಡರ ಆಶೀರ್ವಾದ ಮತ್ತು ಮಾರ್ಗದರ್ಶನ ಲಭಿಸಿದೆ ಎಂದರು. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಮೋದಿಜೀ ಅವರ ಕೈಗಳನ್ನು ಬಲಪಡಿಸಬೇಕಿದೆ ಎಂದು ತಿಳಿಸಿದರು.


ಬಿಜೆಪಿ ಒಂದು ಜಾತಿ, ವರ್ಗಕ್ಕೆ ಸೀಮಿತ ಪಕ್ಷವಲ್ಲ. ಯಡಿಯೂರಪ್ಪ ಅವರ ಮಾದರಿಯಲ್ಲಿ ಪರಿಶಿಷ್ಟ ಜಾತಿ, ವರ್ಗ, ಎಲ್ಲ ಸಮುದಾಯದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಮುನ್ನಡೆಯಬೇಕು. ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಇದು ಅನಿವಾರ್ಯ ಎಂದು ಅವರು ತಿಳಿಸಿದರು.
ಬಿಜೆಪಿ ನಗರ ಕೇಂದ್ರಿತ ಪಕ್ಷವಾಗಿ ಉಳಿಯದಂತೆ ಮತ್ತು ರಾಜ್ಯದ ಹಳ್ಳಿಹಳ್ಳಿಗೆ ವಿಸ್ತರಿಸಲು ಯಡಿಯೂರಪ್ಪ, ಅನಂತಕುಮಾರ್, ಈಶ್ವರಪ್ಪ ಅವರು ಸೇರಿದಂತೆ ಅನೇಕ ಹಿರಿಯರ ಶ್ರಮವಿದೆ. ಆ ಶ್ರಮ ಸಾರ್ಥಕ ಆಗಲು ನಾವೆಲ್ಲರೂ ಎಚ್ಚತ್ತುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಕಾಂಗ್ರೆಸ್ ಆಡಳಿತ ವೈಖರಿಯನ್ನು ಟೀಕಿಸಿದ ಅವರು, ತೀವ್ರ ಬರಗಾಲ ಇದ್ದರೂ ಸಚಿವರು ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಆಕ್ಷೇಪಿಸಿದರು. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿದೆ ಎಂದು ಸಚಿವರೇ ಹೇಳುತ್ತಿದ್ದಾರೆ ಎಂದರು. ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಭದ್ರ ಬುನಾದಿ ಹಾಕುವ ಉದ್ದೇಶದೊಂದಿಗೆ ಇಲ್ಲಿ ಬಂದಿದ್ದೇನೆ. ನಾವೆಲ್ಲರೂ ಪಕ್ಷಕ್ಕಾಗಿ ಒಗ್ಗಟ್ಟಾಗಿ ದುಡಿದರೆ, ಮುಂದಿನ ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧ್ಯವಿದೆ. ಅದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬುನಾದಿಯಾಗಲಿದೆ ಎಂದು ವಿಶ್ಲೇಷಿಸಿದರು.


ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಂಸದ ವಿಜಯ್ ಶಂಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಮಾಜಿ ಶಾಸಕರಾದ ಎಲ್ ನಾಗೇಂದ್ರ, ಎನ್.ಮಹೇಶ್, ಹರ್ಷವರ್ಧನ್, ನಿರಂಜನ್ ಕುಮಾರ್, ಮೇಯರ್ ಶಿವಕುಮಾರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಳಾ ಸೋಮಶೇಖರ್, ಮುಖಂಡರಾದ ಆರ್.ರಘು ಕೌಟಿಲ್ಯ, ಎಂ.ಶಿವಣ್ಣ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru vijayendra bjp congress jds siddaramiah dkshivakumar Hdk hdkumaraswamy
admin November 20, 2023
Share this Article
Facebook Twitter Whatsapp Whatsapp LinkedIn Copy Link
Previous Article ಬಿಜೆಪಿ ಭರವಸೆಗಳನ್ನು ಜನರು ನಂಬಲ್ಲ – ಸಿಎಂ ಸಿದ್ದರಾಮಯ್ಯ
Next Article ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದೆ – ಡಿಸಿ ಕೆವಿ ರಾಜೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?