ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ ಹಿನ್ನೆಲೆ ಮೈಸೂರಿನಲ್ಲಿ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಡಿ. 6 ಆದ ಮೇಲೆ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ.
ಅರವಿಂದ ನಿಂಬಾವಳಿ ಹೇಳಿರುವ ಮಾತಿಗೆ ನನ್ನ ಸಮ್ಮತಿ ಇದೆ.ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ.6ನೇ ತಾರೀಕು ಆದ ಮೇಲೆ ಅದನ್ನು ವಿವರಿಸ್ತಿನಿ.ಹೈಕಮಾಂಡ್ ಸೂಚನೆ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಎಂಬುದನ್ನು ಡಿ.6 ಆದ ಹೇಳ್ತಿನಿ. ಬಿಡಿ, ಬಿಡಿಯಾಗಿ ವಿವರಿಸ್ತಿನಿ ಎಂದರು.
ರಾಜಕಾರಣ ದೊಂಬರಾಟ ಅಲ್ಲ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ. ಒಳ ಒಪ್ಪಂದಕ್ಕೆ ಸಿಮೀತವಲ್ಲ.
ಯಡಿಯೂರಪ್ಪ ತಮ್ಮನ್ನು ಸಂಪರ್ಕಿಸಿದ್ದರಾ ಎಂಬ ಪ್ರಶ್ನೆಗೆ ಸೋಮಣ್ಣ ಪ್ರತಿಕ್ರಿಯೆ ನೀಡಿದ ಅವರು ನನ್ನನ್ನು ಯಾರು ಸಂಪರ್ಕಿಸಿಲ್ಲ. ನಾನು ಯಾರನ್ನು ಸಂಪರ್ಕಿಸಿಲ್ಲ. ಆ ಥರದ ಯಾವ ಪ್ರಯತ್ನವೂ ನಡೆದಿಲ್ಲ ಎಂದು ಹೇಳಿದರು