ರಾಮನಗರ : ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ ವಿಚಾರ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ.ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದು ಬಿಡ್ತೀವಿ
ಬಂದಮೇಲೆ ಎಲ್ಲಾ ಕೇಸ್ ಗಳನ್ನ ಮುಚ್ಚಿಹಾಕಬಹುದು ಅಂತಾ ಐದಾರು ತಿಂಗಳು ಮುಂದೂಡ್ತಿದ್ದಾರೆ.
ಇದೆಲ್ಲಾ ತಂತ್ರಗಾರಿಕೆ ಅಷ್ಟೇ.ಅದು ಮುಂದೆ ಏನೇನಾಗುತ್ತೋ ನೋಡೊಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ನಾನು ವಕೀಲನಾಗಿರುವುದಕ್ಕೆ ಕೇಸ್ ವಾಪಸ್ಸ್ ತೆಗೆದುಕೊಂಡಿದ್ದು ಎಂಬ ಸಿಎಂ ಸಿದ್ದು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ದೊಡ್ಡ ವಕೀಲರು ಅಂತ ಗೊತ್ತು ನನಗೆ.ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರಲ್ವಾ.ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೋ ಮಾಡಿದ್ರಿ.
ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ.
ಆ ರೀತಿಯ ವಕೀಲರು ಇವರು.ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ.ಆ ವಕೀಲಿಕೆಲಿ ಇವರು ಬುದ್ದಿವಂತರಿದ್ದಾರೆ.ಎಸಿಬಿ ರಚನೆ ಮಾಡಿ, ಇವರ ಮೇಲೆ ಬಂದ ಕೇಸ್ ಗಳನ್ನ ಮುಚ್ಚಿಹಾಕಿಕೊಂಡ್ರು.
ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಹೋರಾಟ ಮಾಡಿದ್ದೆ.ನನ್ನ ಮೇಲೆ ಇವರ ಸರ್ಕಾರದ 15 ಕೇಸ್ ಇತ್ತಲ್ಲ.ನಾನು ಆವಾಗ ಇವರ ರೀತಿ ನಡೆದುಕೊಂಡನಾ.ಇಲ್ಲ ಎರಡನೇ ಬಾರಿ ಸಿಎಂ ಆದಾಗ ನನ್ನ ಮೇಲಿನ ಕೇಸ್ ಮುಚ್ಚಿಹಾಕಿದ್ನಾ.?
ಮೆರಿಟ್ ಇದ್ರೆ ಮಾಡಿಕೊಳ್ಳಲಿ ಅಂತ ಬಿಟ್ಟಿದ್ದೀನಿ.
ಅವರಿಗೂ, ನಮಗೂ ಇರುವ ವ್ಯತ್ಯಾಸ ಅಷ್ಟೇ ಎಂದು ತಿರುಗೇಟು ನೀಡಿದರು.
ನಿಮ್ಮ 2 ಸಾವಿರ ತುಮಕೂರಿನಲ್ಲಿ ಅತ್ಮಹತ್ಯೆ ಮಾಡಿಕೊಂಡ ಕುಟುಂಬವನ್ನು ಬದುಕಿಸಿತ್ತಾ ಐದು ಗ್ಯಾರಿಂಟಿ ಕೊಟ್ಟಿದ್ದೀವಿ.
ನುಡಿದಂತೆ ನಡೆದಿದ್ದೇವೆ ಅಂತ ಹೇಳ್ತಾ ಇದ್ದೀರಾ.?ನಿಮ್ಮ ಗ್ಯಾರಂಟಿ ಎಷ್ಟುದಿನ ಕೊಡ್ತೀರಾ ?ನಿರಂತರವಾಗಿ ಕೊಡಲು ನಿಮಗೆ ಸಾಧ್ಯನಾ..?ಸರ್ಕಾರ ಮೇಲೆ ಆಗುವ ಆರ್ಥಿಕ ಹೊರೆ ಏನು? ಅಭಿವೃದ್ಧಿ ಕಾರ್ಯಗಳ ಮೇಲೆ ಆಗುವ ದುಷ್ಪರಿಣಾಮ ಏನು.?
6 ತಿಂಗಳಿಂದ ನೋಡ್ತಾ ಇದ್ದೇವೆ.ಯಾವುದೇ ಅಭಿವೃದ್ಧಿ ಆಗ್ತಾ ಇಲ್ಲ. ದಿನ ಬೆಳಗ್ಗೆ ಎದ್ರೆ ನೂರಾರು ಕೋಟಿ ವೆಚ್ಚದಲ್ಲಿ ಜಾಹಿರಾತು ನೀಡ್ತಾ ಇದ್ದೀರ.ಎಷ್ಟು ದಿನ ಇದನ್ನ ಹೇಳಿಕೊಂಡು ಹೋಗ್ತೀರಿ.ನಿಮ್ಮ ಎರಡು ಸಾವಿರದಲ್ಲಿ ಜನ ಬದುಕಬಹುದಾದ್ರೆ. ತುಮಕೂರಿನಲ್ಲಿ ಜನ್ಮಕೊಟ್ಟ ತಂದೆನೆ ಮಕ್ಕಳನ್ನ ಕೊಲೆ ಮಾಡಿ ಅವರು ಆತ್ಮಹತ್ಯೆ ಮಾಡಿಕೊಂಡ್ರು. ಆ ಕುಟುಂಬ ನಾಶ ಆಯ್ತಲ್ಲ.
ನಿಮ್ಮ ಎರಡು ಸಾವಿರ ರೂ ಬದುಕಿಸುತ್ತೀರಾ..?
ಜನಗಳ ಆರ್ಥಿಕ ಬದುಕನ್ನಿ ಕಟ್ಟಿಕೊಳ್ಳೊವ ಕಾರ್ಯಕ್ರಮಗಳನ್ನು ಸರ್ಕಾರ ಕೊಡಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಮಾತಿನಲ್ಲೇ ತಿವಿದರು
ಡಯಾಲಿಸಿಸ್ ಕೇಂದ್ರದ ಸಿಬ್ಬಂದಿ ಮುಷ್ಕರ ವಿಚಾರ.
ಸರ್ಕಾರ ತಕ್ಷಣ ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು.
ಇದು ಜನ ಸಾಮಾನ್ಯರ ಜೀವನ್ಮರಣದ ಪ್ರಶ್ನೆ.
ಸಿಬ್ಬಂದಿ ಮುಷ್ಕರ ಮಾಡಿದ್ರೆ ಜನಸಾಮಾನ್ಯರಿಗೆ ತೊಂದರೆ ಆಗುತ್ತೆ.ಈ ಈಗಾಗಲೆ ಅಲ್ಲಿನ ಸಿಬ್ಬಂದಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರ ತಕ್ಷಣ ಸಿಬ್ಬಂದಿಯ ಸಂಬಳ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ನೀಮಾನ್ಸ್ ನಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮಗು ಸಾವು ವಿಚಾರ.
ನಿಮಾನ್ಸ್ ನಲ್ಲಿ ರೋಗಿಗಳ ಒತ್ತಡ ಜಾಸ್ತಿ.
ಕೇಂದ್ರ ಸರ್ಕಾರಕ್ಕೆ ಒಳಪಡುವ ಆಡಳಿತಮಂಡಳಿ ಇದೆ.
ಒಂದು ಜೊಡೆ ಮೂಲ ಸೌಕರ್ಯದ ಕೊರತೆ ಇದೆ.
ಸರ್ಕಾರಗಳು ಕ್ರಮ ಕೈಗೊಳ್ಳದಿದ್ದಾಗ ಒತ್ತಡ ಜಾಸ್ತಿ ಇದೆ.
ಸರ್ಕಾರ ಇವುಗಳನ್ನ ಸರಿಪಡಿಸಬೇಕು.
ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು.
ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆ.
ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಮುಷ್ಕರ ವಿಚಾರ
ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ಸರ್ಕಾರ ಗೌರವಿಸುತ್ತಿಲ್ಲ.ಸಾಕಷ್ಟು ಶಾಲಾ ಕಾಲೇಜುಗಳಲ್ಲಿ ಶಿಕ್ಷರ ಕೊರತೆ ಇದೆ..ಜೊತೆಗೆ ಹಲಾವಾರು ಸಮಸ್ಯೆ ಇದೆ.
ಹೀಗಾದ್ರೆಸರ್ಕಾರಿ ಕಾಲೇಜುಗಳಿಗೆ ಪೋಷಕರು ಹೇಗೆ ಸೇರಿಸ್ತಾರೆ.ಸರ್ಕಾರಿ ಕಾಲೇಜುಗಳಿಗೆ ಹೆಚ್ವಿನ ಆಧ್ಯತೆ ನೀಡಬೇಕು.ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ಸರ್ಕಾರಿ ಶಾಲಾ ಕಾಲೇಜಿನ ಮೂಲಸೌಕರ್ಯದ ಆದ್ಯತೆ ನೀಡೋದನ್ನು ಈ ಸರ್ಕಾರದಲ್ಲಿ ಕಾಣುತ್ತಿಲ್ಲ.
ಶಿಕ್ಷಣ ಮತ್ತು ಆರೋಗ್ಯ ಕೇಂದ್ರಕ್ಕೆ ಆದ್ಯತೆ ಈ ಸರ್ಕಾರ ನೀಡುತ್ತಿಲ್ಲ.ಇದರಿಂದ ಪೋಷಕರು ಖಾಸಗಿ ಶಾಲಾ ಕಾಲೇಜಿಗೆ ಕಳುಹಿಸುತ್ತಾರೆ.ಇದರಿಂದ ಪೋಷಕರಿಗೆ ಸಾಕಷ್ಟು ಹೊರೆ ಆಗ್ತಾ ಇದೆ.10 ಸಾವಿರ ಶಿಕ್ಷಕರ ನೇಮಕ ಮಾಡಲು ಪ್ರಪೋಸಲ್ ಕಳ್ಸಿದ್ದೇವೆ ಅಂತ ಇಲಾಖೆ ಹೇಳ್ತಾ ಇದೆ.ಕಳೆದ 6 ತಿಂಗಳಿಂದಲೂ ಇದನ್ನೇ ಹೇಳ್ತಾ ಇದೀರಾ.
ಇನ್ನು ಎಷ್ಟು ದಿನ ಬೇಕು ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದರು.