• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ತುಮಕೂರಿನಲ್ಲಿ ಇಂದು ವಿ.ಸೋಮಣ್ಣ ಶಕ್ತಿ ಪ್ರದರ್ಶನ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ತುಮಕೂರು > ತುಮಕೂರಿನಲ್ಲಿ ಇಂದು ವಿ.ಸೋಮಣ್ಣ ಶಕ್ತಿ ಪ್ರದರ್ಶನ
ಜಿಲ್ಲೆತುಮಕೂರುರಾಜಕೀಯರಾಜ್ಯ

ತುಮಕೂರಿನಲ್ಲಿ ಇಂದು ವಿ.ಸೋಮಣ್ಣ ಶಕ್ತಿ ಪ್ರದರ್ಶನ

admin
Last updated: 2023/12/06 at 3:54 AM
admin
Share
1 Min Read
SHARE

ತುಮಕೂರು : ಸಿದ್ದಗಂಗಾ ಮಠದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡ ಗುರುಭವನ ಇಂದು ಲೋಕಾರ್ಪಣೆಗೊಳ್ಳಲಿದೆ. ಈಗಾಗಲೇ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ತೊಡೆತಟ್ಟಿರುವ ವಿ.ಸೋಮಣ್ಣ ಈ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಾ ಎಂಬ ಕುತೂಹಲ ಹುಟ್ಟಿದೆ. ಗೃಹ ಸಚಿವ ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ ಉಪಸ್ಥಿತರಿರುವ ಈ ವೇದಿಕೆಯಲ್ಲಿ ಸೋಮಣ್ಣ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸುತ್ತಾರಾ ಎಂಬ ಗುಸುಗುಸು ಚರ್ಚೆ ಶುರುವಾಗಿದೆ.

ಸಿದ್ದಗಂಗಾ ಮಠದಲ್ಲಿ ಯತಿವರ್ಯರ ವಾಸ್ತವ್ಯ ಹಾಗೂ ಪೂಜಾ ಕೈಂಕರ್ಯಕ್ಕೆ ಅನುಕೂಲ ಆಗುವ ಉದ್ದೇಶದಿಂದ ವಿ.ಸೋಮಣ್ಣ ಪ್ರತಿಷ್ಠಾನದಿಂದ ಗುರುಭವನ ನಿರ್ಮಾಣಗೊಂಡಿದೆ. ಇಂದು ಬೆಳಗ್ಗೆ ಗುರುಭವನ ಲೋಕಾರ್ಪಣೆಯಾಗಲಿದೆ. ಈ ನೆಪದಲ್ಲಿ ವಿ.ಸೋಮಣ್ಣ ಬಿಜೆಪಿ ನಾಯಕರಿಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ತೊಡೆ ತಟ್ಟಿರುವ ವಿ.ಸೋಮಣ್ಣ ಕಾಂಗ್ರೆಸ್ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಕೈ ಪಕ್ಷದ ಸಖ್ಯ ಬೆಳೆಸಲು ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ. ಇದು ಖಾಸಗಿ ಕಾರ್ಯಕ್ರಮ ಆದರೂ ಹಠಕ್ಕೆ ಬಿದ್ದ ಸೋಮಣ್ಣ ಅವರು ಜಿ.ಪರಮೇಶ್ವರ್ ಕೆ.ಎನ್. ರಾಜಣ್ಣರನ್ನು ಆಹ್ವಾನಿಸಿದ್ದಾರೆ. ಅಧಿವೇಶನ ಇದ್ದರೂ ಈ ಸಚಿವದ್ವಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಕುತೂಹಲ ಹುಟ್ಟಿಸಿದೆ

ಕಳೆದ ಬಾರಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ವಿ.ಸೋಮಣ್ಣ ಅವರು ಶ್ರೀಗಳ ಎದುರಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ವಿ.ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ಪಿಸುಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ಕಾರ್ಯಕ್ರಮದ ನೆಪದಲ್ಲಿ ಕಾಂಗ್ರೆಸ್ ನಾಯಕರ ಜೊತೆ ವೇದಿಕೆ ಹಂಚಿಕೊಂಡು ಪಕ್ಷ ಸೇರುವ ನಿರ್ಧಾರ ಸೂಚ್ಯವಾಗಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದನ್ನು ಸೋಮಣ್ಣ ಪುತ್ರ ಅರುಣ್ ತಳ್ಳಿ ಹಾಕಿದ್ದಾರೆ

ಸಿದ್ದಗಂಗಾ ಮಠ ಮಾಜಿ ಸಿಎಂ ಯಡಿಯೂರಪ್ಪರ ಒಂದು ರೀತಿಯ ರಾಜಕೀಯ ಶಕ್ತಿ ಕೇಂದ್ರ. ಬಿಎಸ್‍ವೈ ಕುಟುಂಬದ ವಿರುದ್ದ ಅಸಮಾಧಾನಗೊಂಡಿರುವ ವಿ.ಸೋಮಣ್ಣ ಇದೇ ಮಠದಿಂದ ತಮ್ಮ ಪಾಂಚಜನ್ಯ ಮೊಳಗಿಸಲು ಮುಂದಡಿ ಇಟ್ಟಂತಿದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah dkshivakumar V.somanna Yadiyurappa Vijayendra Tumkuru
admin December 6, 2023
Share this Article
Facebook Twitter Whatsapp Whatsapp LinkedIn Copy Link
Previous Article ಹುಲಿ ದಾಳಿಗೆ ಎರಡು ಹಸು ಬಲಿ
Next Article ಪಾಲಿಕೆ ಸದಸ್ಯೆ ಕೇಬಲ್ ಗುತ್ತಿಗೆದಾರನ ನಡುವೆ ಜಟಾಪಟಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?