ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನಲೆ ಕೂಲಿ ಹರಸಿ ನೆರೆ ರಾಜ್ಯಗಳಿಗೆ ಗುಳೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಪೋಷಕರ ಜೊತೆ ಶಾಲಾ ಮಕ್ಕಳು ಶಾಲೆಗೆ ಗೈರಾಗಿ ತಂದೆ ತಾಯಿಗಳ ಜೊತೆ ಗುಳೆ ಹೋಗುತ್ತಿದ್ದು ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮದ ಶಾಲೆಗಳಲ್ಲಿ ಸುಮಾರು 24 ಮಕ್ಕಳು ಡ್ರಾಪೌಟ್ ಆಗಿದ್ದಾರೆ. ಸರ್ಕಾರ ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಕಡ್ಡಾಯ ಎಂಬು ಸರ್ಕಾರದ ಆಶಯ.
ಶಾಲೆಯಿಂದ ವಂಚಿತರಾಗುತ್ತಿರುವ ಮಕ್ಕಳು.
ಕೂಲಿ ಹರಸಿ ಹೋಗುವ ತಂದೆ ತಾಯಿ ಮಕ್ಕಳನ್ನು ಜೊತೆಗೆ ಕರೆದೋಯ್ದು ಮಕ್ಕಳ ಭವಿಷ್ಯಕ್ಕೆ ಕಲ್ಲು ಹಾಕುವ ಪೋಷಕರು.
ತಾಲ್ಲೂಕು ಒಂದರಲ್ಲೇ ಸದ್ಯಕ್ಕೆ 24 ಮಕ್ಕಳು ಡ್ರಾಪೌಟ್ ಆಗಿದ್ದು ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
12 ಗಂಡು 12 ಹೆಣ್ಣು ಮಕ್ಕಳು ಕೇರಳಕ್ಕೆ ಗುಳೆ ಹೋಗಿದ್ದಾರೆ . ಗುಳೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಾವುದೇ ಕ್ರಮವಹಿಸಿಲ್ಲ. ಇನ್ನಾದರೂ ಜಿಲ್ಲಾಡಳಿತ
ಮುಂದೆ ಇಂತಹ ಗುಳೆ ಹೋಗುವವರ ತಡೆದು ಮಕ್ಕಳ ಭವಿಷ್ಯದ ಕಡೆ ಗಮನ ಹರಿಸುತ್ತಾ ಕಾದುನೋಡಬೇಕಿದೆ