• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅಥಿತಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜ್ಯ > ಅಥಿತಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
ರಾಜ್ಯ

ಅಥಿತಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

admin
Last updated: 2024/01/06 at 10:22 AM
admin
Share
2 Min Read
SHARE

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ.

ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮಾಜಿ ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Siddaramiah dkshivakumar Guest lectures salary
admin January 6, 2024
Share this Article
Facebook Twitter Whatsapp Whatsapp LinkedIn Copy Link
Previous Article ನಂಜುಂಡೇಶ್ವರ ಸನ್ನಿಧಿಯಲ್ಲಿ ತುಲಾಭಾರ ಹರಕೆ ತೀರಿಸಿದ ವಿಜಯೇಂದ್ರ
Next Article ಬಿ.ಕೆ ಹರಿಪ್ರಸಾದ್ ಅವರಿಗೆ ಮಂಪರು ಪರೀಕ್ಷೆ ಅವಶ್ಯ – ವಿಜಯೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?