ಹಾಸನ : ಜಿಲ್ಲೆಯಲ್ಲಿ ಮುಂದುವರಿದಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಇದೀಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಗುರುವಾರದಿಂದ ಆರಂಭವಾಗಿರುವ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದ್ದು, ಇದೀಗ ದಸರಾ ಆನೆ ಅಭಿಮನ್ಯು ಕಾರ್ಯಾಚರಣೆಗೆ ಎಂಟ್ರಿಯಾಗಿದೆ. ಒಟ್ಟು ಎಂಟು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ಶುಕ್ರವಾರ ಬೆಳಗ್ಗೆಯೇ ಆರಂಭವಾಗಿದೆ.
ಅಭಿಮನ್ಯು, ಪ್ರಶಾಂತ, ಹರ್ಷ, ಅಶ್ವತ್ಥಾಮ, ಸುಗ್ರೀವ, ಧನಂಜಯ, ಭೀಮ, ಮಹೇಂದ್ರ ಆನೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಕಾಡಾನೆ ಸೆರೆಗೆ ಕರೆತಂದಿರುವ ಈ ಸಾಕಾನೆಗಳು ಇದೀಗ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಬಂದಿವೆ.
ಡಿಸೆಂಬರ್ 4ರಂದು ಕಾರ್ಯಾಚರಣೆ ವೇಳೆ ದಸರಾ ಆನೆ ಕ್ಯಾಪ್ಟನ್ ಅರ್ಜುನ ಕಾಡಾನೆ ದಾಳಿಯಿಂದ ಗಾಯಗೊಂಡು ಮೃತಪಟ್ಟಿತ್ತು. ಆ ನಂತರ ಕಾಡಾನೆ ಸೆರೆ ಕಾರ್ಯಾಚರಣೆಗೆ ತಾತ್ಕಾಲಿಕ ತೆರೆ ಬಿದ್ದಿತ್ತು. ಆದರೆ, ಅರ್ಜುನನ ಬಲಿ ಪಡೆದ ಆನೆ ಸೆರೆಹಿಡಿಯಲು ಜನ ಒತ್ತಾಯಿಸಿದ್ದರು.
ಕಾಡಾನೆ ಸೆರೆಗೆ ಕರೆತಂದಿರುವ ಸಾಕಾನೆಗಳು ಇದೀಗ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಬಂದಿವೆ