ನೆನ್ನೆ ಕೇಂದ್ರ ಸರ್ಕಾರದ ವತಿಯಿಂದ ಮಂಡಿಸಲಾದ ಬಜೆಟ್ ನಿರಾಶಾದಾಯಕ ಬಜೆಟ್, ಯಾವ್ಯಾವ ಕಾಮಗಾರಿಗೆ ಎಷ್ಟೆಷ್ಟು ಹಣ ಮೀಸಲಿಡಬೇಕು ಎನ್ನೋದು ಬಜೆಟ್, ಆದರೆ ಇದ್ಯಾವುದೂ ಇಲ್ಲಿ ಪ್ರಸ್ತಾಪ ಆಗಿಲ್ಲ,
ರೈಲ್ವೇ ಬಜೆಟ್ ಮಂಡಿಸಲು ಕಡಿಮೆ ಎಂದರೂ ಮೂರು ಗಂಟೆ ಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಅತ್ಯಂತ ಕಡಿಮೆ ಅವಧಿಯಲ್ಲಿ ಕೇವಲ ಅದೂ 59 ನಿಮಿಷದಲ್ಲಿ ಓದಿ ಕೈತೊಳೆದುಕೊಂಡ್ರು, ನಿರುದ್ಯೋಗ, ಶಿಕ್ಷಣ, ರೈತರ ಸಮಸ್ಯೆ, ಇದ್ಯಾವುದರ ಬಗ್ಗೆಯೂ ಈ ಬಜೆಟ್ ನಲ್ಲಿ ಚರ್ಚೆ ಆಗಿಲ್ಲ,, ಯಾವುದೇ ಅನುದಾನ ನೀಡಿಲ್ಲ,ಚಪ್ಪಲಿ ಹಾಕೋರು, ಮೊಬೈಲ್ ಇರುವವರು ಬಡವರಲ್ವಂತೆ, 25ಕೋಟಿಯಷ್ಟು ಜನ ಬಡತನ ರೇಖೆಗಿಂತ ಮೇಲೆ ಎತ್ತಿದ್ದೇವೆ ಎಂದು ಸುಳ್ಳು ಹೇಳುತ್ತಾರೆ,
ಈ ಬಜೆಟ್ ನ 30% ಸಾಲದ ಬಜೆಟ್, 2014ಮಾರ್ಚ್ 53ಲಕ್ಷ ಕೋಟಿ, 2024ರಲ್ಲಿ 195ಲಕ್ಷ ಕೋಟಿ ಸಾಲ ಮಾಡಿದ್ದೀವಿ ಅಂತ ನೀವೇ ಹೇಳಿದ್ದೀರಿ. ಸಾಲ ಮಾಡಿ ತುಪ್ಪ ತಿನ್ನು ಅಂತಾರೆ, ಸಾಲ ಮಾಡಿದ್ರು ತುಪ್ಪ ತಿನ್ನೋಕೆ ಆಗಲ್ಲ, ನೀವು ಅಧಿಕಾರಕ್ಕೆ ಬಂದಾಗಿನಿಂದ
ಸೂಸೈಡ್ ರೇಟ್ 25% ಜಾಸ್ತಿ ಇದೆ, 16ರಾಜ್ಯಗಳಲ್ಲಿ ಬರ ಬಂದಿದೆ , ಅದಕ್ಕೆ ಪರಿಹಾರ ನೀಡುವ ವಿಚಾರ ಪ್ರಸ್ತಾಪವೇ ಇಲ್ಲ ಎಂದು ಕಿಡಿಕಾರಿದರು.
2004-2014ರ ಮನಮೋಹನ್ ಸಿಂಗ್ ಕಾಲದಲ್ಲಿ 13,7% ಜಿ,ಡಿ,ಪಿ ಗ್ರೋಥ್ ಇತ್ತು, 2014/ರಿಂದ ಇಲ್ಲಿಯವರೆಗೆ ಕೇವಲ 9.6% ಗ್ರೋಥ್ ಅಷ್ಟೆ .
ಮಹಾದಾಯಿ, ಮೇಕೆದಾಟು, ಆಲಮಟ್ಟಿ ಡ್ಯಾಂ ಎತ್ತರ ಮಾಡೋ ವಿಚಾರ , ಪ್ರಸ್ತಾಪ ಇಲ್ಲ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಉಡಿ ಮಣ್ಣು ಇಲ್ಲ. 2024 ಫೆಬ್ರುವರಿ ಗೆ ರೈಲು ಬರುತ್ತೆ ಅಂತ ಸುಳ್ಳು ಹೇಳಿದ್ರು ಇದ್ಯಾವುದೂ ಆಗಿಲ್ಲ ಎಂದು ಹೇಳಿದರು.