ಮೈಸೂರು : ಬಿಜೆಪಿ ಜೊತೆ ಲೋಕಸಭಾ
ಚುನಾವಣಾ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೆ ನಮ್ಮ ತತ್ವ ಸಿದ್ದಾಂತವೇ ಬೇರೆ ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಜೆಡಿಎಸ್ ಪಕ್ಷ ಕಟ್ಟಿದ ಜಯ ಪ್ರಕಾಶ್ ನಾರಾಯಣ್ ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದರು.
ನಮ್ಮ ತತ್ವ ಸಿದ್ಧಾಂತದಲ್ಲಿ ಒಂದಿಂಚು ಕೂಡ ಬದಲಾಗಲ್ಲ.
ಬಿಜೆಪಿಯವರದು ಅವರಿಗೆ ನಮ್ಮದು ನಮಗೆ.
ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ ಎಚ್ಡಿಕೆ ಕೇಸರಿ ಟವೆಲ್ ಹಾಕಿದ ವಿಚಾರ ಅದು ಬಿಜೆಪಿಯವರ ಟವಲ್ ಅಲ್ಲ ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್ ಅದನ್ನೇ ಕಾಂಗ್ರೆಸ್ ನವರು ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದರು.
ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವುದು ಸರಿಯಲ್ಲ. ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಂ ಅವ್ರು ನಾವು ಎಲ್ಲವನ್ನೂ ಕೊಟ್ಟಿದ್ದೇವೆ ಎನ್ನುತ್ತಾರೆ ಇವ್ರು ಕೊಟ್ಟಿಲ್ಲ ಎನ್ನುತ್ತಾರೆ. ಏನೇ ಇದ್ದರು ಕೂತು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬಹುದಿತ್ತು. ಆದರೆ, ರಾಜ್ಯ ಸರ್ಕಾರ ಕೊಟ್ಟಿಲ್ಲ ಅಂತ ಹೇಳಿ ಪ್ರತಿಭಟನೆ ಮಾಡಲು ಮುಂದಾಗಿರುವುದು ಸರಿಯಲ್ಲ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಅಗತ್ಯ ಇರಲಿಲ್ಲ ಜಿಟಿ ದೇವೇಗೌಡ ಹೇಳಿದರು.