• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆಗೆ ಅಗತ್ಯ ಕ್ರಮ – ಪಿ.ರಮೇಶ್ ಕುಮಾರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆಗೆ ಅಗತ್ಯ ಕ್ರಮ – ಪಿ.ರಮೇಶ್ ಕುಮಾರ್
ಚಾಮರಾಜನಗರಜಿಲ್ಲೆ

ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆಗೆ ಅಗತ್ಯ ಕ್ರಮ – ಪಿ.ರಮೇಶ್ ಕುಮಾರ್

admin
Last updated: 2024/02/08 at 5:46 AM
admin
Share
2 Min Read
SHARE

ಚಾಮರಾಜನಗರ: ಬೇಸಿಗೆಯಲ್ಲಿ ಅರಣ್ಯ ಸಂಪತ್ತು ಸಂರಕ್ಷಣೆ ಮಾಡುವ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗತ್ಯ ಕ್ರಮ ಕೈಗೊಂಡು, ದಿನದ ೨೪ ಗಂಟೆಯೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ. ಪಿ.ರಮೇಶ್ ಕುಮಾರ್ ತಿಳಿಸಿದ್ದಾರೆ.

ಬೇಸಿಗೆ ಸಮೀಪಿಸುತ್ತಿದ್ದು, ಈಗಾಗಲೇ ಬಿಸಿಲಿನ ಪ್ರಮಾಣ ತೀವ್ರಗೊಂಡಿದೆ. ಕಳೆದ ಎರಡು ವರ್ಷಗಳಿಂದ ಬಂಡೀಪುರದಲ್ಲಿ ಯಾವುದೇ ಕಾಡ್ಗಿಚ್ಚು ಪ್ರಕರಣ ದಾಖಲಾಗಿಲ್ಲ. ಈ ಬಾರಿಯೂ ಬಂಡೀಪುರ ಅರಣ್ಯವನ್ನು ಕಾಡ್ಗಿಚ್ಚಿನಿಂದ ರಕ್ಷಣೆ ಮಾಡುವುದಕ್ಕೆ ಸಿಬ್ಬಂದಿಗಳು ಪಣ ತೊಟ್ಟು ಶ್ರಮಿಸುತ್ತಿದ್ದಾರೆ. ೧೩ ವಲಯಗಳಲ್ಲಿ ಸುಮಾರು ೫೦೦ ಫೈರ್ ವಾಚರ್ಗಳು ಹಾಗೂ ಇಲಾಖೆಯ ೨೫೦ಕ್ಕೂ ಹೆಚ್ಚು ಸಿಬ್ಬಂದಿಗಳು ಅರಣ್ಯ ಸಂಪತ್ತು ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಈಗಾಗಲೇ ಬಂಡೀಪುರ ಅರಣ್ಯದಲ್ಲಿ ೨೮೭೬ ಕಿ.ಮೀ. ಫೈರ್ಲೈನ್ ನಿರ್ಮಿಸಲಾಗಿದ್ದು, ಫೈರ್ಲೈನ್ಗಾಗಿ ತೆರವುಗೊಳಿಸಿದ್ದ ಲಂಟಾನಾ ಕಳೆಗಿಡವನ್ನು ಸುಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಡಂಚಿನ ಗ್ರಾಮಗಳಲ್ಲಿ ಈಗಾಗಲೇ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗಿದ್ದು, ಬೆಂಕಿ ಪ್ರಕರಣ ತಡೆಗೆ ಅರಣ್ಯ ಇಲಾಖೆಯೊಂದಿಗೆ ಸಹಕಾರ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಕಾಡಂಚಿನ ಗ್ರಾಮಸ್ಥರು ಹಾಗೂ ಹಾಡಿ ನಿವಾಸಿಗಳು ‘ನಮ್ಮ ಬಂಡೀಪುರ ರಕ್ಷಣೆಗೆ ಬದ್ಧವಾಗಿದ್ದು, ಇಲಾಖೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯಿಂದ ಬೆಂಕಿ ನಂದಿಸುವ ವಾಹನಗಳನ್ನು ಕಾಡ್ಗಿಚ್ಚು ನಿಯಂತ್ರಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಯಾವುದಾದರೂ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡರೆ ತುರ್ತಾಗಿ ಆ ಪ್ರದೇಶಕ್ಕೆ ಬೇರೆ ಬೇರೆ ವಲಯದ ಸಿಬ್ಬಂದಿಗಳನ್ನು ಕರೆತರಲು ವಾಹನದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಬಂಡೀಪುರಕ್ಕೆ ಭೇಟಿ ನೀಡಿ ಫೈರ್ಲೈನ್ ಕಾಮಗಾರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರತಿಯೊಂದು ವಲಯದಲ್ಲೂ ಬ್ಲೋವರ್ಗಳನ್ನು ನೀಡಲಾಗಿದ್ದು, ಅದು ಬೆಂಕಿ ನಂದಿಸಲು ಸಹಕಾರಿಯಾಗಲಿದೆ. ೫ ರಿಂದ ೬ ಮಂದಿ ಮಾಡುವ ಕೆಲಸವನ್ನು ಒಂದು ಬ್ಲೋವರ್ ಮಾಡುವುದರಿಂದ ಇದು ಬೆಂಕಿ ತಡೆಗೆ ನೆರವಾಗಲಿದೆ ಎಂದು ತಿಳಿಸಿದರು.

ಬಂಡೀಪುರ ಅರಣ್ಯದಲ್ಲಿ ಹಾದು ಹೋಗಿರುವ ಗುಂಡ್ಲುಪೇಟೆ-ಊಟಿ ರಸ್ತೆ, ಗುಂಡ್ಲುಪೇಟೆ-ಸುಲ್ತಾನ್ ಬತ್ತೇರಿ ರಸ್ತೆಯುದ್ದಕ್ಕೂ ಎರಡೂ ಬದಿಯಲ್ಲೂ ಕಳೆಗಿಡವನ್ನು ಸುಡಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಾರ್ಗಮಧ್ಯೆ ಧೂಮಪಾನ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Chamarajanagar Bandipura Tiger Reserve Forest
admin February 8, 2024
Share this Article
Facebook Twitter Whatsapp Whatsapp LinkedIn Copy Link
Previous Article ಆಹಾರಕ್ಕಾಗಿ ವಾಹನ ತಡೆದ ಕಾಡಾನೆ
Next Article ಮೀಸಲಾತಿ ಲಾಭ ಪಡೆದವರು ಮೀಸಲು ಕೆಟಗರಿಯಿಂದ ಹೊರಬಂದು ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸಿ : ಸುಪ್ರೀಂ ಕೋರ್ಟ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?