• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಸ್ತೆ ಅಪಘಾತಗಳು ಆಗದಂತೆ ತಡೆದು ಅಮೂಲ್ಯವಾದ ಜೀವಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ – ಡಾ. ಕೆ ವಿ ರಾಜೇಂದ್ರ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮಂಡ್ಯ > ರಸ್ತೆ ಅಪಘಾತಗಳು ಆಗದಂತೆ ತಡೆದು ಅಮೂಲ್ಯವಾದ ಜೀವಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ – ಡಾ. ಕೆ ವಿ ರಾಜೇಂದ್ರ
ಜಿಲ್ಲೆಮಂಡ್ಯ

ರಸ್ತೆ ಅಪಘಾತಗಳು ಆಗದಂತೆ ತಡೆದು ಅಮೂಲ್ಯವಾದ ಜೀವಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿ – ಡಾ. ಕೆ ವಿ ರಾಜೇಂದ್ರ

admin
Last updated: 2024/02/14 at 9:27 AM
admin
Share
2 Min Read
SHARE

ಮೈಸೂರು : ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು. ಉತ್ತಮ ರಸ್ತೆಗಳು, ಸಂಚಾರಿ ನಿಯಮಗಳನ್ನು ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಪಘಾತದಿಂದ ಸಾವುಗಳು ಆಗದಂತೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈಸೂರು ನಗರದಲ್ಲಿ ವಿಶಾಲವಾದ ರಸ್ತೆಗಳು ಇವೆ. ಆದರೆ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಇದರಿಂದ ಅಪಘಾತಗಳು ಆಗುತ್ತಿವೆ. *ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯದ ಜೆಸಿ ಕಾಲೇಜು ರಸ್ತೆಯಲ್ಲಿ ಅವೈಜ್ಞಾನಿಕ ಹಂಪ್ ಅಳವಡಿಸುವುದರಿಂದ 3 ಜನ ಅಪಘಾತಕ್ಕೆ ಬಲಿಯಾಗಿದ್ದಾರೆ. ಈ ಅವೈಜ್ಞಾನಿಕ ಹಂಪ್ ಅಳವಡಿಸಿ ಅವಘಡಕ್ಕೆ ಕಾರಣರಾದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಪಾರಸ್ಸು ಮಾಡಲಾಗುವುದು. ರಸ್ತೆಗಳನ್ನು ರಿಪೇರಿ ಹಾಗೂ ಕಾಮಗಾರಿ ಮಾಡುವಾಗ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ರಸ್ತೆ ವೈಟ್ ಟ್ಯಾಪ್ ಗಳು, ಸೂಚನಾ ಫಲಕಗಳನ್ನು ಹಾಕಬೇಕು. ಬದಲಿ ರಸ್ತೆ ಬಳಕೆ ಕುರಿತು ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

ಮೈಸೂರು ಪ್ರವಾಸೋದ್ಯಮಕ್ಕೆ ಹೆಸರಾದ ಜಿಲ್ಲೆ. ಯಾವ ಯಾವ ಪ್ರವಾಸಿ ತಾಣಗಳಿಗೆ ಯಾವ ರಸ್ತೆಯಲ್ಲಿ ಹೋಗಬೇಕು ಎಂಬ ಸೈನ್ ಬೋರ್ಡ್ ಗಳನ್ನು ಅಳವಡಿಸಬೇಕು. ಇದರಿಂದ ಪ್ರವಾಸಿಗರಿಗೆ ಸೂಕ್ತ ಮಾಹಿತಿ ದೊರೆಯುತ್ತದೆ. ಪುಟ್ ಪಾತ್ ಗಳ ಮೇಲೆ ಬೀದಿ ಬದಿ ವ್ಯಾಪಾರಿಗಳು ಅತಿಕ್ರಮ ಮಾಡಿರುತ್ತಾರೆ. ಇದನ್ನು ತೆರವುಗೊಳಿಸಿ ಜನರು ಸಂಚಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಅಪಾಯಕಾರಿ ಮರಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಲು ವರದಿಯನ್ನು ಅರಣ್ಯ ಇಲಾಖೆಗೆ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಪಡೆದು ಅಗತ್ಯವಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಲು ಕ್ರಮವಹಿಸಬೇಕು. ನಗರದಲ್ಲಿರುವ ಅವೈಜ್ಞಾನಿಕ ಹಂಪ್ ಗಳ ಕುರಿತು ಸ್ಧಳ ಪರಿಶೀಲನೆ ಮಾಡಿ ವರದಿಯನ್ನು ತಯಾರಿಸಿ ಒಂದು ವಾರದಲ್ಲಿ ನೀಡಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಮೈಸೂರು ಗ್ರಾಮಾಂತರದಲ್ಲಿ 31 ನಗರ ವ್ಯಾಪ್ತಿಯಲ್ಲಿ 16 ಜನರು ಜನವರಿ ತಿಂಗಳಲ್ಲಿ ಅಪಘಾತ ಪ್ರಕರಣಗಳಿಂದ ಮರಣ ಹೊಂದಿದ್ದಾರೆ. ಈ ಅಪಘಾತಗಳು ಸಂಭವಿಸಲು ಕಾರಣಗಳು ಏನು ಎಂಬುವುದನ್ನು ವರದಿ ನೀಡಬೇಕು.

ಶಿವರಾಂ ಪೇಟೆ ಸರ್ಕಲ್ ನಲ್ಲಿ ಗೂಡ್ಸ್ ವಾಹನಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸಿಕೊಂಡು ಲೋಡಿಂಗ್ ಅನ್ ಲೋಡಿಂಗ್ ಮಾಡುತ್ತಾ ಇರುತ್ತಾರೆ. ಇದರಿಂದ ಅಲ್ಲಿ ಟ್ರಾಫಿಕ್ ಜಾಮ್ ಆಗಿ ವಿಳಂಬ ಆಗುತ್ತದೆ. ಈ ಸಮಯವನ್ನು ಸರಿದೂಗಿಸಲು ವಾಹನ ಸವಾರರು ಮುಂದಿನ ಸಿಗ್ನಲ್ ಗಳಿಂದ ವೇಗವಾಗಿ ಚಾಲನೆ ಮಾಡುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಶಿವರಾಂ ಪೇಟೆ ಸರ್ಕಲ್ ನಲ್ಲಿ ಪೀಕ್ ಸಮಯದಲ್ಲಿ ಗೂಡ್ಸ್ ವಾಹನಗಳನ್ನು ನಿಲ್ಲಿಸದಂತೆ ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಲ್ಮೆಟ್ ಧರಿಸದೆ ಇರುವವರು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸದೆ ಇರುವವರಿಗೆ ದಂಡ ವಿಧಿಸಿ. ಅವೈಜ್ಞಾನಿಕ ಹಂಪ್ ಗಳನ್ನು ತೆರವುಗೊಳಿಸಿ. ಆಟೋ ಚಾಲಕರು, ಗೂಡ್ಸ್ ವಾಹನಗಳ ಚಾಲಕರು, ಬಸ್ ಚಾಲಕರು ಇವರಿಗೆ ನಿಯಮಿತವಾಗಿ ಕಾರ್ಯಾಗಾರಗಳನ್ನು ಮಾಡಿ ಸುರಕ್ಷತಾ ಚಾಲನಾ ನಿಯಮಗಳ ಕುರಿತು ತರಬೇತಿ ನೀಡಬೇಕು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ರಾದ ಅರ್ಷದ್ ಉರ್ ರೆಹಮಾನ್, ಉಪ ಪೊಲೀಸ್ ಆಯುಕ್ತರಾದ ಜಾಹ್ನವಿ, ಲೋಕೋಪಯೋಗಿ ಇಲಾಖೆಗೆ ಕಾರ್ಯಪಾಲಕ ಅಭಿಯಂತರರಾದ ರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Dcrajendra Accident
admin February 14, 2024
Share this Article
Facebook Twitter Whatsapp Whatsapp LinkedIn Copy Link
Previous Article HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮೂರು ತಿಂಗಳು ವಿಸ್ತೀರ್ಣ
Next Article ಪಿಕಪ್ ವಾಹನ ಬೈಕ್ ನಡುವೆ ಅಪಘಾತ ಗೃಹಿಣಿ ಸ್ಥಳದಲ್ಲೇ ಸಾವು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?