• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಕೆ ಹರೀಶ್ ಗೌಡ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಕೆ ಹರೀಶ್ ಗೌಡ
ಜಿಲ್ಲೆಮೈಸೂರು

ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಕೆ ಹರೀಶ್ ಗೌಡ

admin
Last updated: 2024/02/17 at 9:15 AM
admin
Share
2 Min Read
SHARE

ಮೈಸೂರು : ಮಾನವ ಸಮಾಜದ ಬಗ್ಗೆ ಕ್ರಾಂತಿ ಮಾಡಿದ ಏಕೈಕ ವ್ಯಕ್ತಿ ಬಸವಣ್ಣನವರು. ಅವರ ವಚನಗಳ ಮೂಲಕವೇ ಸಮ ಸಮಾಜವನ್ನು ನಿರ್ಮಾಣಮಾಡಲು ಮುಂದಾದವರು. ಇಂತಹವರ ವಚನಗಳನ್ನು ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ಹೇಳಿದರು.

ಇಂದು ಕರ್ನಾಟಕ ಕಲಮಂದಿರದಲ್ಲಿ ನಡೆದ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಯಾವುದೇ ಜಾತಿ – ಧರ್ಮಕ್ಕೆ ಸೀಮಿಯವಾಗಿರದೆ ಎಲ್ಲಾ ಸಮಾನ ಸ್ಥಾನಮಾನಕ್ಕಾಗಿ ಕನಸು ಕಂಡು ಅದಕ್ಕಾಗಿ ಹೋರಾಡಿದವರು. ಅಂತಹ ಮಹಾನುಭಾವರಿಗೆ ವಿಶ್ವಗುರು ಎಂಬ ಬಿರುದನ್ನು ನಮ್ಮ ಮೈಸೂರಿನವರಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಅನುಷ್ಠಾನಗೊಳಿಸಿರುವುದು ಮೈಸೂರಿನವರಾದ ನಮಗೆ ಹೆಮ್ಮೆ ಎಂದರು.

ಇಂದಿನಿಂದ ಮೈಸೂರಿನಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ವಿಶ್ವಗುರು ಬರಹವಿರುವ ಭಾವಚಿತ್ರಗಳು ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನ ಪರಿಷತ್ತಿನ ಶಾಸಕರಾದ ಮರೀತೀಬ್ಬೆಗೌಡ ಅವರು ಮಾತನಾಡಿ ಬಸವಣ್ಣನವರನ್ನು ವಿಶ್ವಗುರು ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದು ಎಲ್ಲರಲ್ಲು ಸಂಚಲನ ಮೂಡಿಸಿದೆ.12 ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪಿಸಿ ಎಲ್ಲಾ ಸಮಾಜದವರನ್ನು ಒಂದೂಗೂಡಿಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಬದುಕನ್ನೇ ಮೂಡಿಪಾಗಿಟ್ಟಿದ್ದಾರೆ. ಆದರೆ ಆ ಯೋಚನೆಗಳು, ಅವರ ವ್ಯಕ್ತಿತ್ವವನ್ನು ಅಳವಡಿಸಿಕೊಂಡು ಅನುಸರಿಸುತ್ತಿರುವವರ ಸಂಖ್ಯೆ ಬೆರಳೆಣಿಕೆಯಷ್ಟು. ಅದರ ಬದಲಾಗಿ ಮೌಢ್ಯತೆ, ಕಂಡಚಾರಗಳಿಗೆ ಒಳಗಾಗಿ ಪ್ರೀತಿ – ಸಹಬಾಳ್ವೆಯನ್ನು ಮರೆತಿದ್ದೇವೆ ಎಂದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಆಶಯದಲ್ಲಿ ಬಸವಣ್ಣನವರ ಸಂದೇಶಗಳು ಅಡಗಿವೆ. ಅವುಗಳನ್ನೇ ಕಾನೂನಿನ ರೂಪದಲ್ಲಿ ಅನುಸರಿಸುತ್ತಿದ್ದೇವೆ. ಬಸವಣ್ಣನವರ ವಚನಗಳಲ್ಲಿ ಎಲ್ಲಾ ಸಮಸ್ಯೆಗಳಿಗೂ ನಿವಾರಣೆ ಸೂತ್ರವನ್ನು ನೀಡಿದ್ದಾರೆ. ಹಾಗಾಗಿ ಅವುಗಳನ್ನು ಅಳವಡಿಸಿಕೊಕ್ಳಳುವುದು ಬಹಳ ಮುಖ್ಯ ಎಂದರು.

ಇಂದು ಸರ್ಕಾರ ಕೊಟ್ಟಿರುವ 5 ಗ್ಯಾರೆಂಟಿಗಳೂ ಸಹ ಬಸವಣ್ಣನವರ ಚಿಂತನೆಗಳೇ ಆಗಿದೆ. ಅವರ ಫೋಟೋ ಇಟ್ಟು ಪೂಜೆ ಮಾಡುವುದಷ್ಟೇ ಅಲ್ಲದೆ ಅವರ ಚಿಂತನೆಗಳನ್ನು ಅಳವಡಿಸಿಕೊಂಡು ಅದರ ಬಗ್ಗೆ ಅರಿವು ಮೂಡಿಸಿಕೊಳ್ಳಲು ಜನರು ಮುಂದಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ಮಾತನಾಡಿ ವಿಶ್ವಗುರು ಎಂಬ ಬಿರುದನ್ನು ಅಧಿಕೃತವಾಗಿ ಸರ್ಕಾರ ಘೋಷಿಸಿದ ನಂತರ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿರುವ ಉದ್ದೇಶ ಅವರು ಸಮಾಜಕ್ಕಾಗಿ ಕೊಟ್ಟಿರುವ ಕೊಡುಗೆಗಳು, ಅವರ ಹೋರಾಟಗಳು ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದಾಗಿದೆ. ಸಮಾಜದ ಅಂಕು – ಡೊಂಕುಗಳನ್ನು ಅವರ ವಚನಗಳ ಮೂಲಕ ತಿದ್ದಿ ಹೇಳಿದ್ದಾರೆ. ಅವರ 12 ನೇ ಶತಮಾನದ ವಚನಗಳು ಇಂದಿಗೂ ಪ್ರಸ್ತುತ ಎಂದರು.

ಪ್ರತಿಯೊಬ್ಬ ವ್ಯಕ್ತಿಯು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮಾದರಿ ಜೀವನ ನಡೆಸಲು ಮುಂದಾಗಬೇಕು. ಇಂತಹ ಮಹಾನ್ ವ್ಯಕ್ತಿಯ ಭಾವಚಿತ್ರ ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಮೊಳಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಸಿ.ಎನ್.ಮಂಜೇಗೌಡ, ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಎಂ ಗಾಯಿತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru kharishgowda
admin February 17, 2024
Share this Article
Facebook Twitter Whatsapp Whatsapp LinkedIn Copy Link
Previous Article ಬೃಹತ್ ಸೈಕಲ್ ಜಾಥಾ ಮೂಲಕ ಸಂವಿಧಾನ ಜಾಗೃತಿ
Next Article ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು :ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?