• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸದನದಲ್ಲಿಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಸದನದಲ್ಲಿಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು
ರಾಜಕೀಯರಾಜ್ಯ

ಸದನದಲ್ಲಿಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು

admin
Last updated: 2024/02/20 at 9:23 AM
admin
Share
2 Min Read
SHARE

– ರಾಜ್ಯದ ಜನರ ಪರ ತಾವು ವಕಾಲತ್ತು ವಹಿಸಿದ್ದನ್ನು ಸದನದಲ್ಲಿ ಬಿಚ್ಚಿಟ್ಟ ಸಿಎಂ

–ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ: ಸದನದಲ್ಲೇ ಬಿಜೆಪಿ ಯನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ ಸರಣಿ ಪತ್ರ ಬರೆದಿರುವುದನ್ನು ವಿವರಿಸಿದರು.

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡುವ ವೇಳೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನರ ಪರವಾಗಿ, ರಾಜ್ಯದ ಪಾಲಿನ ಹಕ್ಕನ್ನು ಪಡೆದುಕೊಳ್ಳಲು ನಡೆಸಿದ ಪ್ರಯತ್ನಗಳನ್ನೆಲ್ಲಾ ಸದನಕ್ಕೆ ವಿವರಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಜತೆ ಸಂಘರ್ಷಕ್ಕೆ ಇಳಿಯಬಾರದು ಎಂದಿದ್ದಾರೆ. ಆದರೆ ನಾವು ಸಂಘರ್ಷಕ್ಕೆ ಇಳಿದಿಲ್ಲ. ರಾಜ್ಯದ ಪಾಲಿನ‌ ಸಂವಿಧಾನಬದ್ದ ಹಕ್ಕನ್ನು, ಅನುದಾನವನ್ನು ಕೇಳುವುದು ಸಂಘರ್ಷ ಆಗುವುದಿಲ್ಲ ಎಂದರು.

ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು‌. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, “ನಿಮ್ಮ ಪತ್ರ ತಲುಪಿದೆ” ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.

ರಾಜ್ಯಕ್ಕೆ ಬರಗಾಲ ಬಂದಾಗ ನರೇಗ ಮಾನವ ದಿನಗಳನ್ನು ನಿಯಮ ಬದ್ದವಾಗಿ 100 ರಿಂದ 150 ದಿನಗಳಿಗೆ ಏರಿಕೆ ಮಾಡಬೇಕಿತ್ತು. ಇದಕ್ಕಾಗಿ ನಾವು ಪದೇ ಪದೇ ಮನವಿ ಮಾಡಿದರೂ ಮಾನವ ದಿನಗಳನ್ನು ಏರಿಕೆ ಮಾಡಲೇ ಇಲ್ಲ. ಇದು ರಾಜ್ಯದ ಜನರಿಗೆ ಮಾಡಿದ ಅನ್ಯಾಯ ಅಲ್ಲವೇ? ನಮ್ಮ ರಾಜ್ಯದ, ರಾಜ್ಯದ ಹಕ್ಕನ್ನು ಕೇಳುವುದು ತಪ್ಪಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆಗಳ ಮೂಲಕವೇ ಹೆಚ್.ಡಿ.ಕುಮಾರಸ್ವಾಮಿ ಮಾತಿಗೆ ಉತ್ತರಿಸಿದರು.

ಗ್ಯಾರಂಟಿಗಳ ಲೆಕ್ಕ ಬಿಚ್ಚಿಟ್ಟ ಸಿಎಂ

ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದ್ದನ್ನು ಮುಖ್ಯಮಂತ್ರಿಗಳು ವಿವರಿಸಿದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಕೋಟಿ , ಕೋಟಿ ಫಲಾನುಭವಿಗಳು ಅನುಕೂಲ ಪಡೆಯುತ್ತಿರುವುದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ನಾವು ಹಣ ಕೊಡ್ತೀವಿ ಎಂದರೂ ಕೇಂದ್ರ ಅಕ್ಕಿ ಏಕೆ ಕೊಡಲಿಲ್ಲ: ಸದನದಲ್ಲೇ ಬಿಜೆಪಿ ಯನ್ನು ಪ್ರಶ್ನಿಸಿದ ಮುಖ್ಯಮಂತದರಿಗಳು

ರಾಜ್ಯದ ಜನರಿಗೆ ಅನ್ನ ಕೊಡುವ ಉದ್ದೇಶದಿಂದ ಕೆಜಿಗೆ 34 ರೂಪಾಯಿ ಕೊಡ್ತೀವಿ, ಈ ಹಣಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದೆವು. ಆದರೆ ರಾಜ್ಯಕ್ಕೆ, ರಾಜ್ಯದ ಜನರಿಗೆ ಅಕ್ಕಿ ಕೊಡಲು ಕೇಂದ್ರ ಒಪ್ಪಲಿಲ್ಲ. ಈಗ 29 ರೂಪಾಯಿಗೆ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ. ಈಗಲೂ ನಮಗೆ ಅದೇ ಬೆಲೆಗೆ ಅಕ್ಕಿ ಕೊಡಿಸಿ. ಅದನ್ನು ನಾವು ಕೇಂದ್ರದಿಂದ ಖರೀದಿಸಿ ರಾಜ್ಯದ ಜನರಿಗೆ ಕೊಡಲು ಸಿದ್ದರಿದ್ದೇವೆ. ನೀವು ಕೇಂದ್ರದ ಜತೆ ಮಾತನಾಡಿ ನಮಗೆ ಅಕ್ಕಿ ಕೊಡಿಸಿ ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.

(ಎರಡನೇ ಕಾಪಿ: ಸದನದಲ್ಲಿ ಸಿಎಂ ಮಾತು ಮುಂದುವರೆದಿದೆ)

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: siddaramiah dkshivakumar hddevegowda hdkumaraswamy bjp congress jds
admin February 20, 2024
Share this Article
Facebook Twitter Whatsapp Whatsapp LinkedIn Copy Link
Previous Article ಚುನಾವಣೆಯು ಸಮೀಪಸುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು : ಡಾ. ಕೆ ವಿ ರಾಜೇಂದ್ರ
Next Article ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ. ಶ್ವೇತಾ ಮಡಪ್ಪಾಡಿ ನೇಮಕಾತಿ.
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?