• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಕ್ಕಳ ಆರೈಕೆ ತಾಣವಾದ ಕೂಸಿನ ಮನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಮಕ್ಕಳ ಆರೈಕೆ ತಾಣವಾದ ಕೂಸಿನ ಮನೆ
ಜಿಲ್ಲೆಮೈಸೂರು

ಮಕ್ಕಳ ಆರೈಕೆ ತಾಣವಾದ ಕೂಸಿನ ಮನೆ

admin
Last updated: 2024/02/21 at 10:16 AM
admin
Share
3 Min Read
SHARE

ಮೈಸೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಸರ್ಕಾರ ಆರಂಭಿಸಿರುವ ಕೂಸಿನ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರಲ್ಲಿ ಕಾರ್ಮಿಕ ಮಹಿಳೆಯರ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ಮ-ನರೇಗಾ ಕೆಲಸದಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕ ಮಹಿಳೆಯರ ಮೂರು ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡುವ ಕೂಸಿನ ಮನೆ ಕೇಂದ್ರ ಜನ ಮೆಚ್ಚುಗೆಗೂ ಪಾತ್ರವಾಗಿದೆ. ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳ ಪೋಷಣೆ, ರಕ್ಷಣೆ, ಪಾಲನೆ ಹಾಗೂ ಪೌಷ್ಠಿಕತೆ ಹೆಚ್ಚಳಕ್ಕೆ ಈ ಕೇಂದ್ರ ಬಹುದೊಡ್ಡ ಹೆಜ್ಜೆಯನ್ನಿರಿಸಿದೆ. ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ತಮ್ಮ ಮಕ್ಕಳನ್ನು ಕೂಸಿನ ಮನೆಯಲ್ಲಿ ಇರಿಸಿ ನೆಮ್ಮದಿಯಿಂದ ಕೂಲಿ ಮಾಡಲು ಕೂಸಿನ ಮನೆಯ ಕೇಂದ್ರ ನೆರವಿಗೆ ನಿಂತಿದೆ.

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ 80 ಕಡೆಗಳಲ್ಲಿ ಕೇಂದ್ರ ಪ್ರಾರಂಭವಾಗಿದೆ. ಎಚ್.ಡಿ.ಕೋಟೆಯಲ್ಲಿ 7, ಹುಣಸೂರಿನಲ್ಲಿ 16, ಕೆ.ಆರ್.ನಗರದಲ್ಲಿ 6, ಮೈಸೂರು 12, ನಂಜನಗೂಡು 11, ಪಿರಿಯಾಪಟ್ಟಣ 12, ಸರಗೂರು 6, ತಿ.ನರಸೀಪುರ 10 ಕಡೆಗಳಲ್ಲಿ ಕೂಸಿನ ಮನೆ ಕಾರ್ಯಾರಂಭ ಮಾಡಿ ಮಕ್ಕಳ ಪಾಲನೆ, ಪೋಷಣೆಗೆ ಶ್ರಮಿಸುತ್ತಿವೆ.

ಮುಂದಿನ ಮಾರ್ಚ್ ಒಳಗೆ ಜಿಲ್ಲೆಗೆ ನಿಗಧಿಪಡಿಸಿರುವ 109 ಗುರಿಯನ್ನು ತಲುಪುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಸನ್ನದ್ಧವಾಗಿದೆ.

ಕೂಸಿನ ಮನೆ ನಿರ್ವಹಣೆಗಾಗಿ ಸರ್ಕಾರದಿಂದ ಮೈಸೂರು ಜಿಲ್ಲೆಗೆ 1 ಕೋಟಿ 9 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಗ್ರಾಮ ಪಂಚಾಯಿತಿಗಳಿಗೆ ಮರುಬಿಡುಗಡೆ ಮಾಡಲಾಗಿದೆ.

ಜಾಬ್ ಕಾರ್ಡ್ದಾರರೇ ಆರೈಕೆದಾರರು

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆದಿರುವ 10ನೇ ತರಗತಿ ಪಾಸಾಗಿರುವ ಮಹಿಳಾ ಕಾರ್ಮಿಕರೇ ಕೇರ್ ಟೇಕರ್ಸ್ ಆಗಿ ಕೂಸಿನ ಮನೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಕೂಸಿನ ಮನೆಯಲ್ಲಿ ಮಕ್ಕಳ ಲಾಲನೆ ಪಾಲನೆ ಕುರಿತು ಈಗಾಗಲೇ ಮೊದಲನೇ ಹಂತದಲ್ಲಿ 351 ಆರೈಕೆದಾರರಿಗೆ ತರಬೇತಿ ನೀಡಲಾಗಿದೆ. ಪ್ರತಿ ಕೇಂದ್ರಕ್ಕೆ ಸುಮಾರು 25 ಮಕ್ಕಳಿಗೆ ಅವಕಾಶವಿದ್ದು, ಪ್ರತಿದಿನ ಕನಿಷ್ಠ 6-7 ಗಂಟೆ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿ ಆರೈಕೆದಾರರದ್ದಾಗಿದೆ.

ಮಕ್ಕಳಿಗೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಲಘು ಉಪಾಹಾರ ನೀಡಲಾಗುತ್ತಿದ್ದು, ಮಕ್ಕಳ ಹಾಜರಾತಿಯನ್ನೂ ನಿರ್ವಹಿಸಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ ಆಯಾ ಗ್ರಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 11 ಜನರ ಸಮಿತಿಯೂ ಇರುತ್ತದೆ.

ಸರ್ಕಾರಿ ಕಟ್ಟಡಗಳಲ್ಲೇ ಕೂಸಿನ ಮನೆ ಆರಂಭ
ಎಲ್ಲೆಲ್ಲಿ ಮ-ನರೇಗಾ ಕಾಮಗಾರಿ ಹೆಚ್ಚೆಚ್ಚು ನಡೆಯುತ್ತಿದ್ದೆಯೂ ಆಯಾ ಭಾಗದಲ್ಲಿನ ಸರ್ಕಾರಿ ಕಟ್ಟಡಗಳಲ್ಲೆ ಕೂಸಿನ ಮನೆ ಸಿದ್ದಗೊಂಡಿದೆ. ಶಾಲಾ ಕಟ್ಟಡ, ಸಮುದಾಯ ಭವನ, ಗ್ರಾ.ಪಂ ಕಟ್ಟಡ ಸೇರಿ ಇನ್ನಿತರೆ ಸರ್ಕಾರಿ ಕಟ್ಟಡಗಳನ್ನು ಗುರುತಿಸಿ, ಕಟ್ಟಡಗಳಿಗೆ ಹೊಸ ಸ್ವರೂಪ ನೀಡುವ ಮೂಲಕ ಸುಂದರಗೊಳಿಸಲಾಗಿದೆ. ಅಲ್ಲದೇ ಮಕ್ಕಳ ಸ್ನೇಹಿ ಚಿತ್ರಗಳನ್ನು ಬಿಡಿಸಿ ಮಕ್ಕಳನ್ನು ಆಕರ್ಷಿಸಲಾಗುತ್ತಿದೆ.

ಕೂಸಿನ ಮನೆಯಲ್ಲಿ ಏನೇನಿವೆ
ಇನ್ನು, ಶಿಶು ಪಾಲನಾ ಕೇಂದ್ರಗಳನ್ನು ಮಕ್ಕಳ ಸ್ನೇಹಿ ಕೇಂದ್ರಗಳನ್ನಾಗಿ ಮಾಡಿದ್ದು, ಈಗಾಗಲೇ ಕೇಂದ್ರದ ಗೋಡೆಗಳಿಗೆ ಮಕ್ಕಳ ಸ್ನೇಹಿ ಪೇಂಟಿಎOಗ್ ಮಾಡಿಸುವ ಮೂಲಕ ಅಂದ ಚೆಂದವನ್ನು ಹೆಚ್ಚಿಸಲಾಗಿದೆ. ಜೊತೆಗೆ ಮಕ್ಕಳ ಆಟೋಟಕ್ಕೆ ಆಟಿಕೆಗಳನ್ನು ಒದಗಿಸಲಾಗಿದ್ದು, ಮಕ್ಕಳು ಕೂಡ ಖುಷಿಯಿಂದ ಆಟವಾಡುತ್ತಿವೆ. ಚಿಕ್ಕ ಮಕ್ಕಳಿಗೆ ಭದ್ರವಾದ ಭಾವನಾತ್ಮಕ ವಾತಾವರಣವನ್ನು ನಿರ್ಮಿಸಿ ಉಳಿಸಿಕೊಳ್ಳುವಲ್ಲಿ ಕೂಸಿನ ಮನೆಯ ಪಾತ್ರವು ಅತ್ಯಂತ ಮಹತ್ವದ್ದಾಗಿದೆ.

ಬಾಕ್ಸ್

ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ

ಸೋಮವಾರ: ಹಾಲು, ದಾಲ್ ಕಿಚಡಿ, ನ್ಯೂಟ್ರಿಮಿಕ್ಸ್, ಮಂಗಳವಾರ: ಹಾಲು, ಸಿಹಿ ಪೊಂಗಲ್, ನ್ಯೂಟ್ರಿಮಿಕ್ಸ್, ಬುಧವಾರ: ಹಾಲು, ಮೊಳಕೆ ಬರಿಸಿದ ಗೋದಿ ಪಾಯಸ, ಶೇಂಗಾ ಲಾಡು, ಗುರುವಾರ: ಹಾಲು, ದಾಲ್ ಕಿಚಡಿ, ನ್ಯೂಟ್ರಿಮಿಕ್ಸ್, ಶುಕ್ರವಾರ: ಹಾಲು, ಸಿಹಿ ಪೊಂಗಲ್, ನ್ಯೂಟ್ರಿಮಿಕ್ಸ್, ಶನಿವಾರ: ಮೊಳಕೆ ಬರಿಸಿದ ಗೋದಿ ಪಾಯಸ, ನ್ಯೂಟ್ರಿಮಿಕ್ಸ್ ವಿತರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಈ ರೀತಿಯ ಆರೋಗ್ಯಕರ ಪೌಷ್ಟಿಕ ಆಹಾರವನ್ನು ಒದಗಿಸುತ್ತಿರುವುದರಿಂದ ಹಾಗೂ ಆರೋಗ್ಯ ತಪಾಸಣೆ ಕೈಗೊಳ್ಳುವುದರಿಂದ ಗ್ರಾಮೀಣ ಭಾಗದ ಮಕ್ಕಳು ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವುದನ್ನು ತಪ್ಪಿಸಲು ಸಹಕಾರಿಯಾಗಿದೆ.

ಕೋಟ್: 1
ಮ-ನರೇಗಾ ಯೋಜನೆಯಲ್ಲಿ ಮಹಿಳಾ ಕೂಲಿಕಾರರಿಗೆ ಸಹಕಾರಿಯಾಗಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಕ್ಕ ಮಕ್ಕಳ ತಾಯಂದಿರು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗುವುದರಿಂದ ಮ-ನರೇಗಾ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಪ್ರಸ್ತುತ ಈ ಯೋಜನೆಯು ಮಕ್ಕಳಿಗೆ ಆಶ್ರಯ ಹಾಗೂ ಮಹಿಳಾ ಕೂಲಿಕಾರರಿಗೆ ಕೂಲಿ ಕೆಲಸ ಹಾಗೂ ಆರ್ಥಿಕ ಸ್ವಾವಲಂಭಿಯಾಗಲು ಸಹಕಾರಿಯಾಗುತ್ತದೆ.

  • ಶ್ರೀಮತಿ ಕೆ.ಎಂ.ಗಾಯಿತ್ರಿ(IAS),
    ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಮೈಸೂರು.

ಕೋಟ್: 2
ಮೈಸೂರು ಜಿಲ್ಲೆಯಲ್ಲಿ ಮ-ನರೇಗಾ ಕೂಲಿ ಜಾಬ್ ಕಾರ್ಡ್ ಹೊಂದಿರುವವರ ಪೈಕಿ ಮೂರು ವರ್ಷದ ಒಳಗಿನ ಮಕ್ಕಳನ್ನು ಗುರುತಿಸಿ ಅವರನ್ನು ಕೂಸಿನ ಮನೆಗೆ ಕರೆತರುವ ಪ್ರಯತ್ನ ನಿರಂತರವಾಗಿ ಸ್ಥಳೀಯ ಸಹಕಾರದಿಂದ ನಡೆಯುತ್ತಿದೆ. ಈಗಾಗಲೇ 80 ಕಡೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಉಳಿದ ಕಡೆಗಳಲ್ಲಿಯೂ ಶೀಘ್ರವಾಗಿ ಜನ ಸೇವೆಗೆ ಕೇಂದ್ರ ತೆರೆದುಕೊಳ್ಳಲಿವೆ.

  • ಡಾ.ಎಂ.ಕೃಷ್ಣರಾಜು, ಜಿ.ಪಂ.ಉಪಕಾರ್ಯದರ್ಶಿ(ಅಭಿವೃದ್ಧಿ) ಹಾಗೂ ಕೂಸಿನ ಮನೆಯ ಜಿಲ್ಲಾ ನೋಡಲ್ ಅಧಿಕಾರಿ

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru children's
admin February 21, 2024
Share this Article
Facebook Twitter Whatsapp Whatsapp LinkedIn Copy Link
Previous Article ಇದು ವಿವಾದದ ಅಂಶವೇ ಅಲ್ಲ : ಸಚಿವ ಮಹದೇವಪ್ಪ
Next Article ಲಾರಿ ಅಡ್ಡಗಟ್ಟಿ ಕಬ್ಬು ಕಿತ್ತ ಕಾಡಾನೆ ಆನೆಯಿಂದ ತಪ್ಪಿಸಿಕೊಳ್ಳಲು ರೌಂಡ್ ಹಾಕಿದ ಡ್ರೈವರ್ !
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?