ದೆಹಲಿಯಲ್ಲಿ ಇಂದು ಕರ್ನಾಟಕ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ದೆಹಲಿಯಲ್ಲೇ ಇದ್ದಾರೆ. ಇವತ್ತು ಚರ್ಚೆ ಮಾಡಿ, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ. 28ಕ್ಕೆ 28 ಸ್ಥಾನ ಗೆಲ್ಲುವ ಗುರಿ ಇದೆ. 25 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಇದೇ ವೇಳೆ, ಮೈಸೂರು ಲೋಕಸಭಾ ಅಭ್ಯರ್ಥಿ ವಿಚಾರದಲ್ಲಿ ಯದುವೀರ್ ಸಂಪರ್ಕ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆ ರೀತಿಯ ವಿಚಾರ ಇದ್ದರೆ, ನಾನು ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದಿದ್ದಾರೆ.
ಹಾಲಿ ಎಂಪಿಗಳಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಆ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಇನ್ನೊಂದೆಡೆ ಮೋದಿ ಅವರ ರಾಜ್ಯ ಪ್ರವಾಸವೂ ಫಿಕ್ಸ್ ಆಗಿದೆ. ಶಿವಮೊಗ್ಗಕ್ಕೂ ಅವರು ಬರಲಿದ್ದಾರೆ. ಎಲ್ಲ ಕಡೆ ಹೆಚ್ಚು ಜನ ಸೇರಿಸಬೇಕು, ಸೇರಿಸುತ್ತೇವೆ ಎಂದಿದ್ದಾರೆ.