• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಾರುತಿ ಓಮ್ನಿ ಮೇಲೆ ಕಬ್ಬಿನ ಲಾರಿ ಪಲ್ಟಿ ಸ್ಥಳದಲ್ಲೇ ಮೂವರ ಸಾವು
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಮಾರುತಿ ಓಮ್ನಿ ಮೇಲೆ ಕಬ್ಬಿನ ಲಾರಿ ಪಲ್ಟಿ ಸ್ಥಳದಲ್ಲೇ ಮೂವರ ಸಾವು
ಚಾಮರಾಜನಗರಜಿಲ್ಲೆ

ಮಾರುತಿ ಓಮ್ನಿ ಮೇಲೆ ಕಬ್ಬಿನ ಲಾರಿ ಪಲ್ಟಿ ಸ್ಥಳದಲ್ಲೇ ಮೂವರ ಸಾವು

admin
Last updated: 2024/03/12 at 5:08 AM
admin
Share
1 Min Read
SHARE

ಚಾಮರಾಜನಗರ: ಮಾರುತಿ ಓಮ್ನಿ ವಾನ್ ಮೇಲೆ ಕಬ್ಬಿನ ಲಾರಿ ಪಲ್ಟಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ಮಂಗಳವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಮಾರ್ಗವಾಗಿ ಹಾದು ಹೋಗುವ ಕರ್ನಾಟಕ ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ದಿಂಬಂ ಘಾಟ್ ನ 27 ನೇ ತೀವ್ರ ತಿರುವಿನಲ್ಲಿ ಮಾರುತಿ ಓಮ್ನಿ ಕಾರಿನ ಮೇಲೆ ಕಬ್ಬು ತುಂಬಿದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಸ್ತೆ ಅಪಘಾತದಿಂದಾಗಿ ದಿಂಬಂ ನಲ್ಲಿ ವಾಹನ ಸಂಚಾರ ಸ್ಥಗಿತವಾಗಿದ್ದು, ಕರ್ನಾಟಕ ತಮಿಳುನಾಡಿನ ನಡುವೆ ಸಂಚಾರ ಅಸ್ತವ್ಯಸ್ತವಾಗಿದೆ.

ತಮಿಳುನಾಡಿನ ಈರೋಡ್ನಿಂದ ಒಂದೇ ಕುಟುಂಬದ ಐವರು ದೇವರ ದರ್ಶನ ಪಡೆಯಲು ದಿಂಬಂ ಮಾರ್ಗವಾಗಿ ಕರ್ನಾಟಕದ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುತ್ತಿದ್ದರು. ಆ ವೇಳೆ ತಾಳವಾಡಿ ಕಡೆಯಿಂದ ಕಬ್ಬು ತುಂಬಿಕೊಂಡು ಲಾರಿಯೊಂದು ದಿಂಬಂ ಮಾರ್ಗವಾಗಿ ತೆರಳುತ್ತಿತ್ತು. ದಿಂಬಂ ನ 27ರಂದು ತೀವ್ರ ತಿರುವುವಿನಲ್ಲಿ ಬಳಿ ಹೋಗುತ್ತಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದೆ. ಈ ಅವಘಡದಲ್ಲಿ ಲಾರಿಯಲ್ಲಿದ್ದ ಕಬ್ಬಿ ಕಾರಿನ ಮೇಲೆ ಬಿದ್ದಿದ್ದು, ಕಾರು ಕಬ್ಬಿನಡಿ ಸಿಲುಕಿಕೊಂಡಿದೆ.

ಇದಾದ ಬಳಿಕ ವಾಹನ ಸವಾರರು ಕಬ್ಬಿನ್ನು ತೆಗೆದು ಕಾರಿನಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಮುಂದಾದರು. ಇಬ್ಬರನ್ನು ತಕ್ಷಣ ರಕ್ಷಿಸಲಾಗಿದ್ದು, ಮೂವರು ಕಾರಿನೊಳಗೆ ಅವಶೇಷಗಳಡಿ ಸಿಲುಕಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಅಲ್ಲಿಗೆ ಬಂದು ಕಬ್ಬಿನ ಕಟ್ಟುಗಳನ್ನು ತೆಗೆದಿದ್ದಾರೆ.
ಆದರೆ ಈ ಅವಘಡದಲ್ಲಿ ಕಾರಿನೊಳಗೆ ಬಹಳ ಹೊತ್ತು ಸಿಲುಕಿಕೊಂಡಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಕ್ಷಿಸಲ್ಪಟ್ಟ ಇಬ್ಬರನ್ನು ಚಿಕಿತ್ಸೆಗಾಗಿ ಸತ್ಯಮಂಗಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಅವಘಡದಿಂದಾಗಿ ದಿಂಬಂ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಅಪಘಾತದ ಬಗ್ಗೆ ಆಸನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Chamarajanagar accident Omni car loory
admin March 12, 2024
Share this Article
Facebook Twitter Whatsapp Whatsapp LinkedIn Copy Link
Previous Article ಅತಿಯಾದ ಪ್ರಯೋಗ ಗೆಲ್ಲುವ ಕ್ಷೇತ್ರ ಸೋಲುತ್ತಾ ಬಿಜೆಪಿ !
Next Article ಪಾಳು ಮನೆಯಲ್ಲಿ ಜಿಂಕೆ ಕಳೆಬರಹ ಪತ್ತೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?