• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು – ಲಕ್ಷ್ಮೀ ಹೆಬ್ಬಾಳಕರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಳಗಾವಿ > ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿರಾಜಕೀಯರಾಜ್ಯ

ಬಡವರ ಹಸಿವು ನೀಗಿಸುತ್ತಿರುವ ಗ್ಯಾರಂಟಿ ಯೋಜನೆಗಳು – ಲಕ್ಷ್ಮೀ ಹೆಬ್ಬಾಳಕರ್

admin
Last updated: 2024/03/15 at 11:48 AM
admin
Share
2 Min Read
SHARE

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಶ್ರಮಿಕರ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಯಶಸ್ವಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿಯ ತಾಲೂಕು ಗುರು ಭವನದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಕೊಟ್ಟ ಮಾತಿನಂತೆ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ ಎಂದರು.

ಕೊರೋನಾ ಮಾರಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರು ಬೆಲೆ ಏರಿಕೆಯಿಂದಾಗಿ ತತ್ತರಿಸಿದ್ದರು. ಇಂಥ ಜನರ ಅನುಕೂಲಕ್ಕಾಗಿ ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಪಕ್ಷಾತೀತವಾಗಿ, ಯಾವುದೇ ಭೇದಭಾವ ಇಲ್ಲದೆ, ಮಧ್ಯವರ್ತಿಗಳ ಹಾವಳಿ ಇಲ್ಲದೆ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ ಎಂದು ಸಚಿವರು ಹೇಳಿದರು.
ಜನರ ನೆಮ್ಮದಿಗಾಗಿ ಕಾರ್ಯರೂಪಕ್ಕೆ ತರಲಾದ ಈ ಯೋಜನೆಗಳು ಇಂದು ಮನೆ ಮನೆಗೆ ತಲುಪಿವೆ. ಸರ್ಕಾರ ಜಾರಿಗೆ ತಂದ ಯೋಜನೆಗಳಿಂದ ಕೂಲಿ ಕಾರ್ಮಿಕರು, ಕಡು ಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಸವದತ್ತಿ ಯಲ್ಲಮ್ಮ ಹಾಗೂ ನನ್ನ ತಂದೆತಾಯಿಗಳ ಆಶೀರ್ವಾದ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನತೆಯ ಬೆಂಬಲದಿಂದಾಗಿ ಇಂದು ಸಚಿವೆಯಾಗಿರುವೆ. ವಾರ್ಷಿಕ 34 ಸಾವಿರ ಕೋಟಿ ಬಜೆಟ್ ಇರುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಅದೃಷ್ಟ ನನ್ನ ಪಾಲಿಗೆ ಬಂತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸವದತ್ತಿ ಕ್ಷೇತ್ರಕ್ಕೆ ಗೃಹಲಕ್ಷ್ಮಿ ಯೋಜನೆಗಾಗಿ ತಿಂಗಳಿಗೆ 15.99 ಕೋಟಿ ರೂಪಾಯಿ ನೀಡಲಾಗ್ತಿದೆ. ಒಂದು ವರ್ಷ ವರ್ಷಕ್ಕೆ 192 ಕೋಟಿ ನೀಡಲಾಗುತ್ತದೆ. ಐದು ವರ್ಷಕ್ಕೆ ಸಾವಿರ ಕೋಟಿಗಿಂತ ಹೆಚ್ಚು ಆಗುತ್ತದೆ. ಬಡವರಿಗಾಗಿ ಸಿದ್ದರಾಮಯ್ಯ ಇಂಥ ಉಪಯುಕ್ತ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮೋದಿ, ಬಿಜೆಪಿಯವರು ಮಾಡದಂತ ಕೆಲಸವನ್ನು ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ ಎಂದು ಹೇಳಿದರು.

ಮೋದಿ ಯಾವುದೇ ಕಾರ್ಯಕ್ರಮಗಳನ್ನು ಮಾಡಿದರೂ ಅಂಬಾನಿ, ಅದಾನಿಯಂತ ಶ್ರೀಮಂತರಿಗಾಗಿ ಮಾತ್ರ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ರೈತರಿಗೆ, ಬಡವರಿಗಾಗಿ ಮಾತ್ರ. ಅಭಿವೃದ್ಧಿ ಕೆಲಸಗಳು ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಂಗ್ರೆಸ್ ಸರ್ಕಾರ ಇರುವವರೆಗೂ ನಮ್ಮ ಯೋಜನೆಗಳು ನಿಲ್ಲುವುದಿಲ್ಲ. ಬಿಜೆಪಿಯವರು ಯೋಜನೆಗಳ ಬಗ್ಗೆ ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂಥ ಊಹಾಪೋಹಗಳಿಗೆ ಕಿವಿಗೊಡದೆ ಸರ್ಕಾರವನ್ನು ಮುಂದಿನ ದಿನಗಳಲ್ಲೂ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಈ ಭಾಗದ ಶಾಸಕರಾದ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಮಾತನಾಡಿದರು.

ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳ್ಕರ್, ತಹಶಿಲ್ದಾರ್ ಮಧುಸೂದನ್ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತಕುಮಾರ್, ಬೈಲಹೊಂಗಲ ಎ.ಸಿ. ಪ್ರಭಾವತಿ, ಸಿಡಿಪಿಓ ಸುನಿತಾ, ಆರ್.ವಿ.ಪಾಟೀಲ, ಡಿ ಡಿ ಟೋಪೋಜಿ, ಮಲ್ಲು ಜಕಾತಿ, ಉಮೇಶ ಬಾಳಿ, ಚಂದು ಜಂಬಳಿ, ಮಹಾರಾಜಗೌಡ ಪಾಟೀಲ, ರಾಮನಗೌಡ ತಿಪ್ಪರಾಶಿ, ತಾಲೂಕಿನ ಫಲಾನುಭವಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Belagavi Lakshmihebbalkar politics siddaramiah Guarenty schemes
admin March 15, 2024
Share this Article
Facebook Twitter Whatsapp Whatsapp LinkedIn Copy Link
Previous Article ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ
Next Article ಪಕ್ಷದ ಪರ ಮೋದಿ ಪರ ಕೆಲ್ಸ ಮಾಡ್ತೀವಿ : ಸಿಟಿ ರವಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?