• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಶೋಷಿತ ಸಮುದಾಯದ ಏಳಿಗೆಗೆ ನಾನು ಕಟಿಬದ್ಧ: ಡಾ.ಹೆಚ್.ಸಿ.ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಶೋಷಿತ ಸಮುದಾಯದ ಏಳಿಗೆಗೆ ನಾನು ಕಟಿಬದ್ಧ: ಡಾ.ಹೆಚ್.ಸಿ.ಮಹದೇವಪ್ಪ
ರಾಜಕೀಯರಾಜ್ಯ

ಶೋಷಿತ ಸಮುದಾಯದ ಏಳಿಗೆಗೆ ನಾನು ಕಟಿಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

admin
Last updated: 2024/03/16 at 9:30 AM
admin
Share
2 Min Read
SHARE

ಮೈಸೂರು : ಶತಮಾನಗಳಿಂದ ಸಮಾಜದಲ್ಲಿ ತುಳಿತಕ್ಕೊಳಗಾದವರು ಹಾಗೂ ಶೋಷಿತ ಸಮುದಾಯಗಳ ಏಳಿಗೆಗೆ ಶ್ರಮಿಸುವ ತುಡಿತ ನನ್ನಲ್ಲಿ ಅಚಲವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೆವಪ್ಪ ಅವರು ಹೇಳಿದರು.

ನಗರದ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ 10 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜಕೀಯ ಮತ್ತು ಮತಬ್ಯಾಂಕ್ ದೃಷ್ಟಿಯಲ್ಲಿ ನಾನು ಯಾವುದೇ ಅಭಿವೃದ್ಧಿ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.

ಅಶೋಕಪುರಂ ಎಂದರೆ ಎಲ್ಲಾ ದಲಿತರಿಗೆ ವಿಶೇಷ ಆಸಕ್ತಿ ಮತ್ತು ನಂಬಿಕೆ. ಯಾಕೆಂದರೆ ಇಡೀ ಜಿಲ್ಲೆಗೆ ರಕ್ಷಾಕವಚವಾಗಿದೆ. ಜಾತಿವ್ಯವಸ್ಥೆಯಲ್ಲಿ ಜನರು ತೊಂದರೆ ಅನುಭವಿಸಿದರೆ ಧಾವಿಸುತ್ತಾರೆ. ಅಸಂಖ್ಯಾತ ಯುವಕರು ಇಲ್ಲಿ ವಿದ್ಯಾವಂತರಿದ್ದಾರೆ. ನನಗೂ ಕೂಡ ಆಶೋಕಪುರಂ ಹಾಗೂ ಗಾಂಧಿನಗರವೆಂದರೆ ವಿಶ್ವಾಸವಿದೆ. ಬಸವಲಿಂಗಪ್ಪ, ಬಿ.ರಾಚಯ್ಯ, ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಲ್ಲಿಯವರೇ ಆದ ವಿ‌.ಶ್ರೀನಿವಾಸಪ್ರಸಾದ್ ಅವರಿಗೂ ಅಚ್ಚುಮೆಚ್ಚಿನ ಸ್ಥಳವಾಗಿದೆ ಎಂದರು.

ಇಲ್ಲಿನ ಜನರು ಸ್ವಾಭಿಮಾನದ ಬದುಕು ನಡೆಸಬೇಕು. ಜನರ ಜೀವನಮಟ್ಟ ಸುಧಾರಣೆಯಾಗಬೇಕು, ಯುವಕರಿಗೆ ಒಳ್ಳೆಯ ಭವಿಷ್ಯ ದೊರಕಬೇಕೆಂದು ನಿರಂತರವಾಗಿ ಚಿಂತನೆ ಮಾಡುತ್ತೇನೆ. ಆದರೆ ನಮ್ಮ ಆಸಕ್ತಿಗೆ ತಕ್ಕಂತೆ ಇಲ್ಲಿ ಅಭಿವೃದ್ಧಿಯಾಗಲಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಜೀವನ ಉತ್ತಂಕೇರಿ ಗುಣಮಟ್ಟದ ಬೆಳವಣಿಗೆ ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಅವಧಿಯಲ್ಲಿ ನಗರದ ಹೃದಯ ಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭವನ ನಿರ್ಮಾಣ ಅನೇಕ ಒತ್ತಾಯಗಳಿಂದ ಪ್ರಾರಂಭಿಸಲಾಗಿತು. ಆದರೆ ಹಣಕಾಸಿನ ತೊಂದರೆಯಿಂದ ಕಾಮಗಾರಿ ನೆನಗುದಿಗೆ ಬಿದ್ದಿತ್ತು. ಬಳಿಕ ಸಮುದಾಯದ ಪರ ಮಾತನಾಡುವ ನಾಯಕರು ಯಾರೂ ಕಾಮಗಾರಿ ಬಗ್ಗೆ ಗಮನಹರಿಸಲಿಲ್ಲ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾನು ಸಚಿವನಾಗಿ ಕಾಮಗಾರಿಯನ್ನು ಮುಂದುವರೆಸಲು ಸಚಿವ ಸಂಪುಟದಲ್ಲಿಟ್ಟು 19 ಕೋಟಿಯನ್ನು ಮಂಜೂರು ಮಾಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು‌.

ಅಶೋಕಪುರಂ ಜನರು ಕೇಳಿದ ಎಲ್ಲಾ ಅಭಿವೃದ್ಧಿಗೆ ಸಮ್ಮತಿ ನೀಡಿದ್ದೇನೆ. ಅನೇಕ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಇಲ್ಲಿನ ಜನರ ಏಳಿಗೆಗಾಗಿ ನಾನು ಕಟಿಬದ್ದನಿದ್ದೇನೆ. ಜಿಲ್ಲಾಮಟ್ಟದ ಅಧಿಕಾರಿಗಳನ್ನು ನನ್ನೊಟ್ಟಿಗೆ ಕರೆದು ಜನಸಂಪರ್ಕ ಸಭೆ ನಡೆಸಿ, ನಿಮ್ಮ ಕುಂದುಕೊರತೆಯನ್ನು ಆಲಿಸಲಾಗುವುದು. ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಸವಲತ್ತು ಪಡೆಯಬೇಕು. ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಮಾಡಬಾರದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ತಿ.ನರಸೀಪುರ ಕ್ಷೇತ್ರ ಕೆ.ಡಿ.ಪಿ ಸದಸ್ಯರಾದ ಸುನೀಲ್ ಬೋಸ್, ಕೆ.ಪಿ.ಸಿ.ಸಿ ವಕ್ತಾರ ಎಂ.ಲಕ್ಷ್ಮಣ್, ಮಾಜಿ ಮೇಯರ್ ಪುರುಷೋತ್ತಮ್, ಆದಿ ಕರ್ನಾಟಕ ಮಹಾಸಂಸ್ಥೆಯ ಅಧ್ಯಕ್ಷ ಸುನೀಲ್, ಉಪಾಧ್ಯಕ್ಷ ಶಿವಸ್ವಾಮಿ, ನಗರ ಪಾಲಿಕೆ ಸದಸ್ಯೆ ಪಲ್ಲವಿ ಬೇಗಂ, ಪ್ರೊ.ಪಿ.ವಿ.ನಂಜರಾಜ ಅರಸ್, ಮುಖಂಡರಾದ ಈಶ್ವರ್, ರೇವಣ್ಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Hcmahadevappa bjp jds congress politics sunilbose
admin March 16, 2024
Share this Article
Facebook Twitter Whatsapp Whatsapp LinkedIn Copy Link
Previous Article ಏಳನೇ ವೇತನ ಆಯೋಗದ ವರದಿ ಸಲ್ಲಿಕೆ : ಶೇ 27.5 ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು
Next Article ನೀರಿನಲ್ಲಿ ವಿಷ ಬೆರಸಿ ಅಣ್ಣನ ಮಗನ ಕೊಲೆಗೆ ಯತ್ನ : ಐವರ ವಿರುದ್ಧ FIR
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?