• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ಗೌರವ ತಂದುಕೊಡಿ : ಎಂ.ಲಕ್ಷ್ಮಣ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ಗೌರವ ತಂದುಕೊಡಿ : ಎಂ.ಲಕ್ಷ್ಮಣ್
ಜಿಲ್ಲೆಮೈಸೂರುರಾಜಕೀಯರಾಜ್ಯ

ನನ್ನನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯಗೆ ಗೌರವ ತಂದುಕೊಡಿ : ಎಂ.ಲಕ್ಷ್ಮಣ್

admin
Last updated: 2024/03/29 at 11:14 AM
admin
Share
2 Min Read
SHARE

ಮೈಸೂರು: ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌‍ ಮನವಿ ಮಾಡಿದರು.


ನಗರದ ಕಾಂಗ್ರೆಸ್‌‍ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್‌‍ ಮತ್ತು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಜಿಲ್ಲೆಯ ವಿಧಾನ ಸಭಾ ಕ್ಷೇತ್ರಗಳ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಕಳೆದ 10 ವರ್ಷಗಳಿಂದ ಸ್ವಂತ ಜಿಲ್ಲೆಯಲ್ಲಿ ಲೋಕಸಭಾ ಅಭ್ಯರ್ಥಿ ಸೋತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಕೊರಗಿದೆ. ಕುರುಬ ಸಮುದಾಯಕ್ಕೆ ಟಿಕೆಟ್‌‍ ನೀಡಿದ್ದರಿಂದ ಸೋಲಾಯಿತು ಎಂಬ ಕಾರಣ ಬಂದ ಹಿನ್ನೆಲೆಯಲ್ಲಿ ಈ ಬಾರಿ ಒಕ್ಕಲಿಗ ಸಮುದಾಯದ ನನಗೆ ಟಿಕೆಟ್‌‍ ಕೊಟ್ಟಿದ್ದಾರೆ. ಒಕ್ಕಲಿಗ ಸಮುದಾಯ ಮತ ನೀಡಬೇಕು ಎಂದು ಮನವಿ ಮಾಡಿದರು.


ನಾನು ಹಣೆಯ ಮೇಲೆ ಜಾತಿ ಹೆಸರು ಬರೆದುಕೊಂಡವನಲ್ಲ. ನಾನು ಹುಟ್ಟಿದ್ದು ಒಕ್ಕಲಿಗನಾಗಿ, ಆದರೆ ಬೆಳೆಯುತ್ತ ವಿಶ್ವಮಾನನಾದೇ. ಆದರೆ, ಪ್ರತಾಪ ಸಿಂಹ ಟಿಕೆಟ್‌‍ ತಪ್ಪಿರುವ ಹತಾಸೆಯಿಂದ ಮಾಧ್ಯಮಗಳು ಮುಂದೆ ಜಾತಿ ಪ್ರಶ್ನಿಸುತ್ತಿದ್ದಾರೆ, ನನ್ನನ್ನು ಜೈಲಿಗೆ ಕಳುಹಿಸುತ್ತೇನೆ ಎಂಬ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಅವರ ವಿರುದ್ಧ ಮಾತನಾಡಬಾರದು ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಕ್ಕೆ ಕಾರಣ ಕೇಳಿದರೇ ಉತ್ತರಿಸುತ್ತಿಲ್ಲ ಎಂದು ಹೇಳಿದರು.
ಮೈಸೂರು ಕೊಡಗು ಭಾಗದಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಪೂರಕ ವಾತಾವರಣವಿದೆ. ಇಂತಹ ಸಂದರ್ಭದಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಬೇಡಿ. ನಾನು ಸೋತು ಸೋತು ಸಾಕಾಗಿದೆ. ಕೊನೆಯದಾಗಿ ಕಾಂಗ್ರೆಸ್‌‍ ಪಕ್ಷ ಅವಕಾಶ ನೀಡಿದೆ. ಈ ಬಾರಿ ಸೋತರೆ ಸತ್ತಂತೆ ಎಂದು ಪುನರ್‌‍ ಉಚ್ಚರಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸಲಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳನ್ನು ಭೀಕ್ಷುಕರನ್ನಾಗಿ ಮಾಡಲಿದೆ. ಈಗಾಗಲೇ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ಸೌಲಭ್ಯ ದೊರೆಕದಂತೆ ಮಾಡುತ್ತಿದೆ. ಏಕ ರೂಪ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶಗೊಳಿಸಲಿದೆ ಎಂದು ದೂರಿದರು.

ಸಂಸದ ಪ್ರತಾಪ ಸಿಂಹ ವಿರುದ್ಧ ಸೋಲಿಸಬೇಕು ಎಂದು ಹೋರಾಟ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌‍ ಅವರಿಗೆ ಮನವರಿಕೆ ಮಾಡಿ ಟಿಕೆಟ್‌‍ ಪಡೆದುಕೊಂಡೆ. ಆದರೆ, ರಾಜಕೀಯ ಕುಸ್ತಿಗೆ ಅವರೆ ಇಲ್ಲ. ಬೇರೆಯವರನ್ನು ಕಳುಹಿಸಿದ್ದಾರೆ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಕಿಡಿ ಹೊತ್ತಿಸುವುದು ಬಿಟ್ಟರೇ ಏನನ್ನು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದ ಯೋಜನೆಗಳನ್ನು ಪುಸ್ತಕದಲ್ಲಿ ಪ್ರಕಟಿಸಿ ತನ್ನದು ಎಂದು ಸುಳ್ಳೇಳಿ ಊರೇಲ್ಲ ತಿರುಗಾಡುತ್ತಿದ್ದಾರೆ. ಇವರ ಸುಳ್ಳಗಳನ್ನು ಕಾಂಗ್ರೆಸ್ಸಿಗರು ಬಯಲು ಮಾಡದ್ದಿದ್ದರೇ ಕೆಆರ್‌‍ಎಸ್‌‍ ಅಣೆಕಟ್ಟೆಯನ್ನು ನಮ ತಾತ ನಿರ್ಮಿಸಿದರು ಎಂದು ಹೇಳುತ್ತಿದ್ದರು. ಇದನ್ನು ನಂಬುವ ಮೂರ್ಖರು ನಮಲ್ಲಿದ್ದಾರೆ ಎಂದು ಟೀಕಿಸಿದರು.


ಇದಕ್ಕೂ ಮುನ್ನು ನಮ ಸಂಸದರು ನಮ ಹೆಮೆ ಪೋಸ್ಟರ್‌‍ ಅನ್ನು ಬಿಡುಗಡೆಗೊಳಿಸಲಾಯಿತು. ಕಾಂಗ್ರೆಸ್‌‍ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌‍, ನಗರಾಧ್ಯಕ್ಷ ಆರ್‌‍.ಮೂರ್ತಿ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮೋಸಿನ್‌‍ ಖಾನ್‌‍, ಶಿವಪ್ರಸಾದ್‌‍, ಮಾಧ್ಯಮ ವಕ್ತಾರ ಕೆ.ಮಹೇಶ್‌‍ ಮುಂತಾದವರು ಹಾಜರಿದ್ದರು.


ಯದುವೀರ್‌‍ ಕೃಷ್ಣದತ್ತ ಚಾಮರಾಜ ಒಡೆಯರ್‌‍ ಅವರು ಮಹಾರಾಜರು, ಅರಮನೆ ಇರುವವರು. ನಾನು ಬೀದಿಯಲ್ಲಿ ಇರುವವನು, 30 ವರ್ಷಗಳಿಂದ ಹೋರಾಟ ಮಾಡಿ ಬಂದವನು. ರಿಯಲ್‌‍ ಎಸ್ಟೇಟ್‌‍ ಮಾಡುವವನಲ್ಲ, ಸಾವಿರಾರು ಕೋಟಿ ಒಡೆಯನಲ್ಲ. ಫುಟಾಬಾತ್‌‍ನಲ್ಲಿ ಊಟ-ತಿಂಡಿ-ಟೀ ಕುಡಿಯುವವನು. ಈಗ ಜನ ಸಾಮಾನ್ಯರು ತೀರ್ಮಾನ ಮಾಡಬೇಕು. ಸಾಮಾನ್ಯರಿಗೆ ಸಿಗುವ ವ್ಯಕ್ತಿ ಬೇಕಾ ಅಥವಾ ಟಿಕೆಟ್‌‍ ತೆಗೆದುಕೊಂಡು ಅರಮನೆಗೆ ಹೋಗಿ ಭೇಟಿ ಮಾಡುವ ವ್ಯಕ್ತಿ ಬೇಕಾ ಎಂದು ಪ್ರಶ್ನೆ ಮಾಡಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah dkshivakumar congress jds bjp Mlakshman
admin March 29, 2024
Share this Article
Facebook Twitter Whatsapp Whatsapp LinkedIn Copy Link
Previous Article ಚೆಕ್ ಪೋಸ್ಟ್ ನಲ್ಲಿ 4 ಲಕ್ಷಕ್ಕೂ ಅಧಿಕ ಹಣ ವಶ
Next Article ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ನಮ್ಮದೆ : ಸುನೀಲ್ ಬೋಸ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?