ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು
ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರದ ಜತೆಗೆ ಮತಯಾಚಿಸಿ ಮಾತನಾಡಿದರು,
ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುನಾಗಿಸುವ ದೆಸೆಯಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜ ತಾಂತ್ರಿಕ ವಿಷಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ, ಅಲ್ಲದೆ ಮೋದಿವರ ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ, ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು
ಇದೇ ಸಂದರ್ಭದಲ್ಲಿ ಮಾಜಿ ಉಪ ಉಪ ಮಹಾಪೌರರು ಹಾಗೂ ಎಸಿ ಮೋರ್ಚಾ ಅಧ್ಯಕ್ಷರಾದ ವಿ ಶೈಲೇಂದ್ರ, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು,
ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ ಆರ್ ಕ್ಷೇತ್ರದ ಅಧ್ಯಕ್ಷರಾದ ಗೋಪಾಲ್ ರಾಜ್ ಅರಸ್, ಜೆ ರವಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ, ಹಾಗೂ ಸ್ಥಳಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು