• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಪೌರ ಕಾರ್ಮಿಕರಿಂದ ಮಲ ಹೊರಿಸಿದ ಅಧಿಕಾರಿಗಳು : ಇನ್ನೂ ನಿಂತಿಲ್ಲ ಅಮಾನುಷ ಕೃತ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಪೌರ ಕಾರ್ಮಿಕರಿಂದ ಮಲ ಹೊರಿಸಿದ ಅಧಿಕಾರಿಗಳು : ಇನ್ನೂ ನಿಂತಿಲ್ಲ ಅಮಾನುಷ ಕೃತ್ಯ
ಚಾಮರಾಜನಗರಜಿಲ್ಲೆ

ಪೌರ ಕಾರ್ಮಿಕರಿಂದ ಮಲ ಹೊರಿಸಿದ ಅಧಿಕಾರಿಗಳು : ಇನ್ನೂ ನಿಂತಿಲ್ಲ ಅಮಾನುಷ ಕೃತ್ಯ

admin
Last updated: 2024/04/15 at 11:53 AM
admin
Share
3 Min Read
SHARE

– ಮಲ ಹೊರುವ ಪದ್ದತಿಗೆ ಮುನ್ನುಡಿ ಹಾಡಿದ ಹನೂರು ಪಟ್ಟಣ ಪಂಚಾಯತ್..!

– ಪೌರಕಾರ್ಮಿಕರಿಂದಲೇ ಮಲ ಹೊರಿಸಿದ ಪ.ಪಂ.ಅಧಿಕಾರಿಗಳು..!

ಚಾಮರಾಜನಗರ : ಮಲ ಹೊರುವ ಪದ್ದತಿ ವಿರುದ್ದ ಅರಿವು ಮೂಡಿಸಿ ಕ್ರಮಕ್ಕೆ ಮುಂದಾಗ ಬೇಕಾದ ಸ್ಥಳೀಯ ಸಂಸ್ಥೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳೇ ಪೌರಕಾರ್ಮಿಕರಿಂದ ಸಾರ್ವತ್ರಿಕವಾಗಿ ಮಲ ಹೊರಿಸುವ ಮೂಲಕ ಕಾರ್ಮಿಕರನ್ನು ಅಪಮಾನಗೊಳಿಸಿ ಅಮಾನವೀಯ ಕೃತ್ಯ ಎಸಗಿರುವ ಅಮಾನುಷ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿದೆ.

ಪ್ರಕರಣದ ವಿವರ : ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ಪಂಚಾಯ್ತಿ ಕಚೇರಿಯ ಕೆಳಗಡೆಯೇ ಇರುವ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ಬೃಹತ್ ಗುಂಡಿಯಲ್ಲಿ ತುಂಬಿದ ಮಲವನ್ನು ಗುರುವಾರ ಮುಂಜಾನೆ ಅವೈಜ್ಞಾನಿಕವಾಗಿ ಪಟ್ಟಣ ಪಂಚಾಯ್ತಿ ಜೆಸಿಬಿ ಯಂತ್ರದಿಂದ ಪಟ್ಟಣದಲ್ಲಿನ ಕಸ ಸಾಗಿಸುವ ಟ್ರಾಕ್ಟರ್ ಗೆ ತುಂಬಿ ಹಲವು ಭಾರಿ ಸಾಗಿಸಲಾಗುತ್ತಿದ್ದಾಗ ಬಹುತೇಕ ಪಾಲು ಮಲ ಪಟ್ಟಣ ಪಂಚಾಯ್ತಿಗೆ ಸೇರಿದ ವಾಣಿಜ್ಯ ಸಂಕೀರ್ಣದ ಅಂಗಡಿ ಮಳಿಗೆಗಳ ಮುಂದೆ ಹಾಗೂ ರಸ್ತೆಯುದ್ದಕ್ಕೂ ಅಲ್ಲಲ್ಲಿ ರಾಶಿ ರಾಶಿಯಾಗಿ ಬಿದ್ದು ಬಸ್ ಗಾಗಿ ನಿಂತ ಪ್ರಯಾಣಿಕರು, ಹಾದಿ ಹೋಕರು, ಅಂಗಡಿ ಮಾಲೀಕರುಗಳು ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.

ಇದರಿಂದ ವಿಚಲಿತರಾದ ಪಟ್ಟಣ ಪಂಚಾಯ್ತಿ ಅಧಿಕಾರಿ ಆರೋಗ್ಯ ನಿರೀಕ್ಷಕಿರವರುಗಳು ಹನೂರು ಪಟ್ಟಣ ಪಂಚಾಯ್ತಿಯಲ್ಲಿ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಂದಲೇ ರಸ್ತೆಯ ಅಲ್ಲಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಮಲವನ್ನು ಸಾರ್ವಜನಿಕರ ಸಮ್ಮುಖದಲ್ಲಿಯೇ ಮಮುಟಿಯಿಂದ ಪ್ಲಾಸ್ಟಿಕ್ ಬುಟ್ಟಿಗೆ ತುಂಬಿ ತಲೆ ಮೇಲೆ ಹೊತ್ತು ಪಟ್ಟಣದ ಕಸ ಸಾಗಿಸುವ ಟೆಂಪೋದಲ್ಲಿ ತುಂಬಿ ಸಾಗಿಸುವಂತೆ ಮಾಡುವ ಮೂಲಕ ಪೌರ ಕಾರ್ಮಿಕರನ್ನು ಸಾರ್ವತ್ರಿಕವಾಗಿ ಅಪಮಾನಗೊಳಿಸುವುದರ ಜತೆಗೆ ಅಮಾನವೀಯತೆ ಮೆರೆದಿದ್ದಾರೆ.

ಈ ಅಮಾನವೀಯ ದೃಶ್ಯವನ್ನು ಬಸ್ ನಿಲ್ದಾಣದಲ್ಲಿದ್ದ ಖಾಸಗಿ ವ್ಯಕ್ತಿಗಳು ಸೆರೆಹಿಡಿದು ಮಾಧ್ಯಮಗಳವರಿಗೆ ನೀಡಿದ್ದಾರೆ. ಅಲ್ಲದೆ ಸದರಿ ಘಟನೆಯ ದೃಶ್ಯಾವಳಿಗಳು ಪಟ್ಟಣ ಪಂಚಾಯ್ತಿ ಮುಖ್ಯ ದ್ವಾರದಲ್ಲೆ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ಪಂಚಾಯ್ತಿಯಲ್ಲಿ ಮಲ ಸಾಗಿಸಲೆಂದೇ ಸೈಕಿಂಗ್ ಯಂತ್ರವಿದೆಯಾದರೂ ಅದನ್ನು ಬಳಸದೆ ಪಂಚಾಯ್ತಿಯ ಜೆಸಿಬಿ ಹಾಗೂ ಕಸ ಸಾಗಣೆ ಟ್ರಾಕ್ಟರ್ ಮತ್ತು ಟೆಂಪೋವನ್ನು ಬಳಸಿಕೊಳ್ಳುವುದರ ಜತೆಗೆ ಪೌರಕಾರ್ಮಿಕರನ್ನು ಬಳಸಿಕೊಂಡಿರುವುದು ಅಕ್ಷಮ್ಯ ಅಪರಾದವಾಗಿದೆ. ಸಾಲದೆಂಬಂತೆ ಸಾರ್ವಜನಿಕ ಶೌಚಾಲಯದ ಶೌಚ ಗುಂಡಿಯಿಂದ ತೆರೆದ ವಾಹನಗಳಲ್ಲಿ ತುಂಬಿದಂತಹ ಬಹುಪಾಲು ದ್ರವ ರೂಪದ ಮಲವನ್ನು ಸಾರ್ವತ್ರಿಕ ಪ್ರದೇಶದ ಹಾದಿಯುದ್ದಕ್ಕೂ ಎಲ್ಲೆಂದರಲ್ಲಿ ಚೆಲ್ಲಿಕೊಂಡು ಹೋಗುವುದರ ಜತೆಗೆ ಬಯಲು ಪ್ರದೇಶದಲ್ಲೇ ಸುರಿಯುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡದೆ ಅನೈರ್ಮಲ್ಯಕ್ಕೆ ಮೂಲ ಕಾರಣರಾಗುವ ಮೂಲಕ ಸಾಂಕ್ರಾಮಿಕ ರೋಗ ರುಜಿನಗಳಿಗೆ ನಾಂದಿ ಹಾಡಿ ನಾಗರೀಕರ ಜೀವದ ಜತೆ ಚೆಲ್ಲಾಟ ಆಡಿದ್ದಾರೆ.

ಇದಲ್ಲದೆ ಸಾರ್ವಜನಿಕ ಶೌಚ ಗುಂಡಿಯ ಮೇಲೆ ಮಲ ಸಾಗಣೆ ಸೈಕಿಂಗ್ ಯಂತ್ರವನ್ನು ನಿಲ್ಲಿಸಿದ್ದರಿಂದ ಅದರ ಭಾರಕ್ಕೆ ಶೌಚ ಗುಂಡಿಯ ಮೇಲ್ಬಾಗದ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಶೌಚ ಗುಂಡಿ ತೆರೆದಂತೆಯೇ ಇರುವುದರಿಂದ ಗುಂಡಿಯಲ್ಲಿ ತುಂಬಿರುವ ಮಲ ಹಾಗೆಯೇ ಗೋಚರವಾಗುವುದರ ಜತೆಗೆ ದುರ್ನಾತ ವಾಣಿಜ್ಯ ಸಂಕೀರ್ಣದ ಸುತ್ತ ಮುತ್ತಲ ಅಂಗಡಿಗಳವರು ಮತ್ತು ಬಸ್ಸಿಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ವ್ಯಾಪಿಸಿ ಸಾಂಕ್ರಾಮಿಕ ರೋಗದ ಭೀತಿಯಲ್ಲೇ ಕಾಲ ದೂಡುವಂತಹ ದುಸ್ಥಿತಿ ಉಂಟಾಗಿದೆ.

ಕಾರ್ಮಿಕರ ದಿನಾಚರಣೆಯಂದು ಪೌರಕಾರ್ಮಿಕರನ್ನು ಸನ್ಮಾನಿಸುವಂತಹ ಬೂಟಾಟಿಕೆ ತೋರುವ ಪಂಚಾಯ್ತಿ ಅಧಿಕಾರಿಗಳು ವಾಸ್ತವದಲ್ಲಿ ಅವರಿಂದಲೇ ಮಲ ಹೊರಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಂಡಿರುವುದರ ವಿರುದ್ದ ತಪ್ಪಿತಸ್ತರ ವಿರುದ್ದ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದೆಂದೂ ಇಂತಹ ಮಲ ಹೊರುವ ಪದ್ದತಿ ಮರುಕಳಿಸದಂತೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಪ್ರಬುದ್ದ ನಾಗರೀಕರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Chamarajanagar Hanuru
admin April 15, 2024
Share this Article
Facebook Twitter Whatsapp Whatsapp LinkedIn Copy Link
Previous Article ಗೊಡೌನ್ ಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ
Next Article ನಿಯಂತ್ರಣ ತಪ್ಪಿ ಕಾರು ಪಲ್ಟಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?