ಮೈಸೂರು : ಎಸ್ಐಟಿ ತಂಡದ ಕೆಲ ಅಧಿಕಾರಿಗಳು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕಾನೂನಿನ ಅಡಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ ಎಂದು ಜೆಡಿಎಸ್ ನಾಯಕ ಸಾರಾ ಮಹೇಶ್ ಆರೋಪಿಸಿದರು.
ಸಂತ್ರಸ್ತೆಯನ್ನ ಇಲ್ಲಿವರಗೆ ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿಲ್ಲ.?ಯಾಕೆ ಇನ್ನೂ ಸ್ಥಳ ಮಹಜರು ಮಾಡಿಲ್ಲ.?ಕಾಂಗ್ರೆಸ್ ನವರು ಹೇಳಿದಂತೆವ ಕೆಲವು ಅಧಿಕಾರಿಗಳು ಮಾಡ್ತಾ ಇದ್ದಾರೆ.ರಾಜಕೀಯ ದುರುದ್ದೇಶದಿಂದ ನಮ್ಮ ಪ್ರಾದೇಶಿಕ ಪಕ್ಷವನ್ನ ಮುಗಿಸುವ ಉನ್ನಾರವನ್ನ ಸಿಎಂ,ಡಿಸಿಎಂ ನಿರ್ದೇಶನದ ಮೇರೆಗೆ ಮಾಡುತ್ತಿದ್ದಾರೆ.ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಏನೂ ಹೇಳಲ್ಲ.ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ.
ಆದರೆ ಪೆನ್ ಡ್ರೈವ್ ವನ್ನ ಹಂಚಿಕೆ ಮಾಡಿ ನೂರಾರು ಮಹಿಳೆಯರ ಮಾನ ಹಾರಾಜು ಹಾಕಿರುವುದು ಅಕ್ಷಮ್ಯ ಅಪರಾಧ.ಇದರ ಬಗ್ಗೆಯೂ ಕೂಡ ಸೂಕ್ತ ತನಿಖೆ ಆಗಬೇಕು.ಪ್ರಕರಣ ಪಿತಾಮಹ ಯಾರು ಎಂದು ಬಯಲಿಗೆ ಬರಬೇಕು. ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸುತ್ತೇನೆ ಮಾಜಿ ಸಚಿವ ಸಾ.ರಾ ಮಹೇಶ್ ಹೇಳಿದರು.