ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಬೀಕನಹಳ್ಳಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಲಾಗಿದೆ.
ರಾಯಣ್ಣ ಅವರ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನ ಕಿಡಿಗೇಡಿಗಲು ವಿರೂಪಗೊಳಿಸಿ, ಕುಕೃತ್ಯ ಮೆರೆದಿದ್ದಾರೆ.
ಕಳೆದ ವರ್ಷ ಗ್ರಾಮಸ್ಥರು ಪ್ರತಿಮೆಯನ್ನ ಪ್ರತಿಷ್ಟಾಪಿಸಿದ್ದರು.
ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯವೆಸಗಿದ್ದಾರೆ.
ಪ್ರತಿಮೆ ಎದುರು ಗ್ರಾಮಸ್ಥರ ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನ ಶೀಘ್ರವೇ ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.