ಚಾಮರಾಜನಗರ: ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದರು.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದರು.
ನಂತರ ಮಾತನಾಡಿದ ರಾಜ್ಯದ್ಯಕ್ಷರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮೈಸೂರು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು ಒಂದುವರೆ ಲಕ್ಷಕ್ಕಿಂತ ಹೆಚ್ಚು ಹೆಕ್ಟರ್ ಪ್ರದೇಶ ತೀವ್ರ ಬಿರುಗಾಳಿಯಿಂದ ನಾಶವಾಗಿದೆ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುವಲ್ಲಿ ಹಾಗೂ ಚುನಾಯಿತ ಪ್ರತಿನಿಧಿಗಳು ಚುನಾವಣಾ ನೀತಿ ಸಂಹಿತೆಯನ್ನು ರೈತರ ಬೆಳೆ ನಷ್ಟ ಅಂದಾಜು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ರೈತರ ಪರವಾಗಿ ಮಾತನಾಡುತ್ತಿಲ್ಲ ನಷ್ಟ ಹೊಂದಿರುವ ಬೆಳೆ ಸಮೀಕ್ಷೆಯ ಬಗ್ಗೆ ಟಿಫನ್ ಆಯ್ತಾ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನೊಂದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಸರ್ಕಾರದ ಹಂತದಲ್ಲಿ ವಿಫಲರಾಗಿದ್ದಾರೆ ರೈತರು ಜಾಗೃತರಾಗಿ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಜಿಲ್ಲಾಡಳಿತ ಸಮರ್ಪಕ ವರದಿಯನ್ನು ತಯಾರಿಸಿ ವಿಶೇಷ ಪ್ಯಾಕೇಜಿಗೆ ವರದಿ ಸಲ್ಲಿಸಬೇಕು ಜಿಲ್ಲಾ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಈ ಜವಾಬ್ದಾರಿಯನ್ನು ತೆಗೆದುಕೊಂಡು ಸಂಬಂಧಪಟ್ಟ ಸಚಿವರ ಜೊತೆ ಮುಖ್ಯಮಂತ್ರಿಗಳ ಜೊತೆ ರೈತರಿಗೆ ನ್ಯಾಯ ಕೊಡಿಸುವಲ್ಲಿ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿ ಎಕರೆಗೆ ಸುಮಾರು ಒಂದು ಲಕ್ಷ ರೂಪಾಯಿನಷ್ಟು ಬೆಳೆ ನಷ್ಟ ನೀಡಬೇಕು ಪ್ರಕೃತಿ ವಿಕೋಪದ ಅಡಿಯಲ್ಲಿ ಪ್ರತಿ ಎಕರೆಗೆ 6800 ರೂಪಾಯಿ ನೀಡುವ ಮಾನದಂಡವನ್ನು ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಬರ ಪರಿಹಾರ ವಿತರಣೆಯಲ್ಲಿ ಶರತ್ತುಗಳನ್ನು ಹಾಕಿ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯವಾಗುತ್ತಿದೆ ನಿರ್ದಿಷ್ಟ ಬೆಳೆಗಳಿಗೆ ಮಾತ್ರ ಹೋಬಳಿವಾರು ಬೆಳೆ ನಷ್ಟ ನೀಡುತ್ತಿರುವುದು ನೊಂದ ರೈತರಿಗೆ ಬೆಳೆ ನಷ್ಟ ಸಿಗುತ್ತಿಲ್ಲ ಆದುದರಿಂದ ಯಾವುದೇ ತಾರತಮ್ಯ ಶರತ್ತುಗಳಿಲ್ಲದೆ ಬರ ಪರಿಹಾರವನ್ನು ಎಲ್ಲರಿಗೂ ಹಂಚಬೇಕು ಎಂದರು ಹಾಗೂ ಹೊಸ ಕೃಷಿ ಪಂಸೆಟ್ಟುಗಳಿಗೆ ಅಕ್ರಮ ಸಕ್ರಮ ಯೋಜನೆಯನ್ನು ಮರು ಜಾರಿ ಮಾಡಬೇಕು ಮತ್ತು ರಾಜ್ಯ ಸರ್ಕಾರ ಬರದಲ್ಲಿ ನೊಂದಿರುವ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 10 ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನ ನೀಡಬೇಕು ಸಮರ್ಪಕವಾಗಿ 10 ಗಂಟೆ ಹಗಲು ವೇಳೆ ವಿದ್ಯುತ್ ನೀಡಬೇಕು. ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಗಳು ಕೃಷಿಗೆ ಸಾಲವನ್ನು ನೀಡಿ ಸಾಲದ ಮೊತ್ತಕ್ಕೆ ಟ್ರ್ಯಾಕ್ಟರ್ ಮತ್ತು ಮತ್ತಿತರ ಕೃಷಿ ಯಂತ್ರೋಪಕರಣಗಳನ್ನು ಜಪ್ತಿ ಮಾಡಿ ನಂತರ ಹೊರ ರಾಜ್ಯಗಳಲ್ಲಿ ಪ್ರಕರಣ ದಾಖಲಿಸಿ ನೀಡಬೇಕು ಹಾಗೂ ಕೃಷಿ ಸಂಬಂಧಿತ ಸಾಲಕ್ಕೆ ಸಿವಿಲ್ ಸ್ಕೋರ್ ಪರಿಗಣನೆಯನ್ನು ಕೈಬಿಡಬೇಕು ಹಾಗೂ ಕಬ್ಬು ಬೆಳೆಗಾರರಿಗೆ ಬರಬೇಕಾದ 900 ಕೋಟಿ ರೂಗಳನ್ನು ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಹಾಲಿನ ನಾಗರಾಜ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲಿಯೂರು ಹರ್ಷ ರವಿ ಹರಳಿಕಟ್ಟೆ ಕುಮಾರ್ ಉಡಿಗಾಲ ಮಂಜುನಾಥ್ ಗುರುಮಲ್ಲಪ್ಪ ಮಹದೇವಸ್ವಾಮಿ ಚೇರ್ಮನ್ ಗುರು ಮಾದೇಶ್ ಜಗ ರಾಜು ಸೂರ್ಯ ಮಲೆಯೂರು ಬಸವರಾಜಪ್ಪ ಮಹೇಂದ್ರ ಸತೀಶ್ ಅರಳಿ ಕಟ್ಟೆ ಪ್ರಭುಸ್ವಾಮಿ ಸಿದ್ದಲಿಂಗಪ್ಪ ಸಿದ್ದಪ್ಪ ಮಹೇಶ ಮುದ್ದಳ್ಳಿ ಚಿಕ್ಕಸ್ವಾಮಿ ಅಂಬಳೆ ಮಂಜುನಾಥ್ ಕೋಣನೂರು ವಿಶ್ವನಾಥ್ ದೇವನೂರು ನಾಗೇಂದ್ರ ಗುರುವಿನಪುರ ಚಂದ್ರು ಪ್ರಸಾದ್ ವಿನಯ್ ಸ್ವಾಮಿ ಆನಂದ ಸುರೇಶ್ ಜನೂರು ಶಾಂತರಾಜು ಸಂಜು ಇನ್ನು ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಹಾಜರಿದ್ದರು.