ಮೈಸೂರು : ಹುಬ್ಬಳ್ಳಿ ಅಂಜಲಿ ಹತ್ಯೆ ಕೊಲೆ ಪ್ರಕರಣ.
ಆರೋಪಿ ಕಳೆದ ನಾಲ್ಕು ತಿಂಗಳನಿಂದ ಮೈಸೂರಿನ ಮಹಾರಾಜ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ.
ವಿನಾಯಕ ನರ್ಸಿಂಗ್ ಕೇರ್ ಏಜೆನ್ಸಿ ಮೂಲಕ ನಮ್ಮ ತಂದೆ ನೋಡಿಕೊಳ್ಳಲು ಬಂದಿದ್ದ.
ಅಲ್ಲಿ ಕೆಲಸ ಬಿಟ್ಟು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ.
ರೂಂ ಬಾಯ್, ಸಪ್ಲೈಯರ್ ಆಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೋಟೆಲ್ ಮಾಲೀಕ ಗೋವರ್ಧನ್ ತಿಳಿಸಿದ್ದಾರೆ.
ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ.
10 ದಿನ 5 ಹೀಗೆ ರಜಾ ತೆಗೆದುಕೊಂಡು ಬಿಟ್ಟು ಬಿಟ್ಟು ಕೆಲಸಕ್ಕೆ ಬರುತ್ತಿದ್ದ. ಏಜೆನ್ಸಿ ಮೂಲಕ ಬಂದ ಕಾರಣ ಹೆಚ್ಚು ರಜಾ ತೆಗೆದುಕೊಂಡರು ನಾನು ಅವನ ಬಗ್ಗೆ ಹೆಚ್ಚು ಕೇಳುತ್ತಿರಲಿಲ್ಲ.ಮಂಗಳವಾರ ಸಂಜೆ 5 ಸಾವಿರ ಹಣ ಅಡ್ವಾನ್ಸ್ ತೆಗೆದುಕೊಂಡು ಹೋದವನು ಮತ್ತೆ ವಾಪಸ್ ಬಂದಿಲ್ಲ.ಮರುದಿನ ಪೊಲೀಸರು ನನಗೆ ಕರೆ ಮಾಡಿದಾಗಲೇ ಈತ ಕೊಲೆ ಮಾಡಿದ್ದಾನೆ ಎಂಬುದು ತಿಳಿಯಿತು.ನಮ್ಮ ಹೋಟೆಲ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಮೊಬೈಲ್ ನಲ್ಲಿ ಹೆಚ್ಚು ಮಾತನಾಡುತ್ತಿದ್ದಾ ಅಂಥ ಹೇಳಿದ್ರು.ಜೊತೆಗೆ ಕಂಪನಿಯ ಫೋನ್ ನಿಂದ ಹೆಚ್ಚು ದಿನ ಮಾತನಾಡಿದ್ದಾನೆ.ಘಟನೆ ನಡೆಯುವ ಹಿಂದಿನ ದಿನ ಜೋರಾಗಿ ಕೂಗಾಡಿ ಮೊಬೈಲ್ ನಲ್ಲಿ ಮಾತನಾಡುತ್ತಿದನಂತೆ.ನಮ್ಮ ಹೋಟೆಲ್ ಗೆ ಏಳು ಜನ ಪೊಲೀಸರು ಬಂದಿದ್ದರು. ನಿನ್ನೆ ರಾತ್ರಿಯವರೆಗೂ ಸಹ ಪೊಲೀಸರ ನಮ್ಮ ಹೋಟೆಲ್ ನಲ್ಲಿ ಬಳಿ ಇದ್ದರು.
ಆತ ದಾವಣಗೆರೆಯಲ್ಲಿ ಸಿಕ್ಕ ಬಳಿಕ ಮಧ್ಯರಾತ್ರಿ ಪೊಲೀಸರು ಇಲ್ಲಿಂದ ತೆರಳಿದ್ರು ಎಂದು
ಮಹರಾಜ ಹೋಟೆಲ್ ಮಾಲೀಕ ಗೋವರ್ಧನ್ ಹೇಳಿದರು